ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವಿದ್ಯಾರ್ಥಿನಿ ಬಲಿ!

Date:

ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವಿದ್ಯಾರ್ಥಿನಿ ಬಲಿ!

ತುಮಕೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ವಯಸ್ಸಿನ ಮಿತಿ ಇಲ್ಲದೇ ವಯಸ್ಕರೂ ಸಹ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳು, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.
ಇದೀಗ ತರಗತಿ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತವಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಪಾವಗಡ ಪಟ್ಟಣದಲ್ಲಿ ಘಟನೆ ನಡೆದಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಎಂಬ ವಿದ್ಯಾರ್ಥಿನಿ ಮೃತ ದುರ್ಧೈವಿಯಾಗಿದ್ದು, ಶ್ರೀ ವೈ ಈ ರಂಗಯ್ಯಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫಸ್ಟ್ ಬಿಕಾಂ ಓದುತ್ತಿದ್ದಳು. ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದೆ. ಕುಸಿದು ಬಿದ್ದ ಮೈಥಿಲಿಯನ್ನು ಸಹಪಾಠಿಗಳು ಸೇರಿದಂತೆ ಸ್ಥಳೀಯರು ತಕ್ಷಣವೇ ಪಾವಗಡ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮದ್ಯದಲ್ಲೇ ಮೈಥಿಲಿ ಮೃತಪಟ್ಟಿದ್ದಾರೆ. ಆಸ್ಪತ್ರೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಮಾಹಿತಿ ತಿಳಿದು ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...