“ಮಿಷನ್ ಯುವ ಸಮೃದ್ಧಿ” ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಒಳಗೆ ಒಂದು ಕೋಟಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಿಷನ್ ಯುವಸಮೃದ್ಧಿ ಯೋಜನೆಯಡಿ ಪ್ರಾಯೋಗಿಕ ಯೋಜನೆ ಕೈಗೊಳ್ಳಲಾಗಿದೆ. ಈ ವಿಶೇಷ ಯೋಜನೆ ಸಲುವಾಗಿ ಕಾರ್ಯಪಡೆ ರೂಪಿಸಲಾಗಿದೆ. ಶೀಘ್ರವೇ ಕಾರ್ಯಪಡೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ “ವಿಶ್ವ ಯುವ ಕೌಶಲ” ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು