ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

Date:

ಬೆಂಗಳೂರು, ಜೂನ್ 17: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಸೇರಿದಂತೆ ಹಲವು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

 

ಆಗುಂಬೆ, ಕೊಲ್ಲೂರು, ಕದ್ರ, ಕೊಟ್ಟಿಗೆಹಾರ, ಭಾಗಮಂಡಲ, ಕಾರವಾರ, ಬೆಳ್ತಂಗಡಿ, ಉಪ್ಪಿನಂಗಡಿ, ಗೋಕರ್ಣ, ಕಳಸ, ತಾಳಗುಪ್ಪ, ಸಿದ್ದಾಪುರ, ಶೃಂಗೇರಿ, ಯಲ್ಲಾಪುರ, ಜಯಪುರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಅಧಿಕ ಮಳೆಯಾಗಿದೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...