ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

Date:

ಬೆಂಗಳೂರು, ಜೂನ್ 17: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಸೇರಿದಂತೆ ಹಲವು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

 

ಆಗುಂಬೆ, ಕೊಲ್ಲೂರು, ಕದ್ರ, ಕೊಟ್ಟಿಗೆಹಾರ, ಭಾಗಮಂಡಲ, ಕಾರವಾರ, ಬೆಳ್ತಂಗಡಿ, ಉಪ್ಪಿನಂಗಡಿ, ಗೋಕರ್ಣ, ಕಳಸ, ತಾಳಗುಪ್ಪ, ಸಿದ್ದಾಪುರ, ಶೃಂಗೇರಿ, ಯಲ್ಲಾಪುರ, ಜಯಪುರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಅಧಿಕ ಮಳೆಯಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...