ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

Date:

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ ಸತ್ಯವನ್ನು ಬಿಚ್ಚಿಟ್ಟು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ B. Y. ವಿಜಯೇಂದ್ರ ಒತ್ತಾಯಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ನಿರ್ವಹಿಸಲು ಹಣಕಾಸಿನ ಸಮಸ್ಯೆ ಎದುರಾಗಿದೆ. ಇದರಿಂದ ಯಾವುದೇ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

“ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂಮುಕ್ಕಾಲು ವರ್ಷಗಳಾಗಿವೆ. ಇನ್ನೂ ಬಿಜೆಪಿ ಸರ್ಕಾರವನ್ನು ದೂರಾಡುವುದು ಸರಿಯಲ್ಲ. ಒಂದು ವರ್ಷದೊಳಗೆ ನೇಮಕಾತಿ ಮಾಡುವ ಭರವಸೆ ನೀಡಿದ್ದೀರಿ. ಸುಳ್ಳು ಹೇಳಿಕೆಗಳು ಹಾಗೂ ಆರೋಪಗಳನ್ನು ಬಿಟ್ಟು, ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು” ಎಂದು ಅವರು ಆಗ್ರಹಿಸಿದರು.

ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸದಿದ್ದರೆ ಬಿಜೆಪಿ ಹೋರಾಟಕ್ಕೆ ಇಳಿಯಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು. ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತರಾದವರ ಹುದ್ದೆಗಳಿಗೆ ನೇಮಕಾತಿ ಮಾಡಲು ಸರ್ಕಾರದ ಅನುಮತಿ ಕೇಳಲಾಗಿತ್ತು. ಸರ್ಕಾರ ಅನುಮತಿ ನೀಡಿದರೂ ಒಂದು ವರ್ಷ ಎಂಟು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಪ್ರಕ್ರಿಯೆ ಮುಂದುವರಿಸಲು ಸರ್ಕಾರ ಸಹಕರಿಸುತ್ತಿಲ್ಲ ಎಂದು ಅವರು ಟೀಕಿಸಿದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...