ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿ ಪ್ರವಾಸ: ನಳಿನ್ ಕುಮಾರ್ ಕಟೀಲ್

0
103

ಬೆಂಗಳೂರು ;- ನಳಿನ್ ಕುಮಾರ್ ಕಟೀಲ್ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಲು ಬಿಜೆಪಿ ನಿರ್ಧರಿಸಿದ್ದು ಇದಕ್ಕಾಗಿ 17 ತಂಡಗಳನ್ನು ರಚಿಸಲಾಗಿದೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ತಂಡಗಳು ಪ್ರಯಾಣ ಮಾಡಿ ನವೆಂಬರ್ 10ರ ಒಳಗೆ ವರದಿ ಸಲ್ಲಿಸಲಿವೆ ಎಂದರು.
ರಾಜ್ಯ ಸರ್ಕಾರ ಬರಪೀಡಿತ ತಾಲ್ಲೂಕುಗಳ ಹೆಸರನ್ನು ಘೋಷಿಸಿದೆಯಾದರೂ ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.5 ತಿಂಗಳಲ್ಲಿ ರಾಜ್ಯದಲ್ಲಿ 250 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಪರಿಹಾರಕ್ಕೆ ಸಂಬಂಧಿಸಿ ಅನುದಾನ ಪಡೆಯಲು ಕೈಗೊಳ್ಳಬೇಕಾದ ಪ್ರಕ್ರಿಯೆಗಳನ್ನು ಮಾಡದೇ ಕೇಂದ್ರವನ್ನು ದೂರುತ್ತಿರುವ ಮುಖ್ಯಮಂತ್ರಿ ಜಾಣ ಮರೆವು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿದ್ದು, ಒಂದು ತಂಡ ತುಮಕೂರು ಮತ್ತೊಂದು ತಂಡ ಬೆಂಗಳೂರು ಜಿಲ್ಲೆಯನ್ನು ಸಂದರ್ಶಿಸಲಿದೆ ಎಂದರು.