ರಾಜ್ಯದ 10 ಸಾವಿರ ಶಾಲೆಗಳು ಮುಚ್ಚುವ ಸಾಧ್ಯತೆ

Date:

ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನುಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ.

ಈ ಶಾಲೆಗಳು ರಾಜ್ಯದ ಹಲವು ಬಡ ಮತ್ತು ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದ, ಈ ಶಾಲೆಗಳನ್ನು ಮುಚ್ಚದಂತೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷದ ನಾಯಕರುಗಳಿಗೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದೆ.

ಲೋಕೋಪಯೋಗಿ ಇಲಾಖೆ ಮಾರ್ಗಸೂಚಿಗಳನ್ನು ನೀಡಿದ್ದು, ಅಗ್ನಿ ಶಾಮಕ ದಳ ಮತ್ತು ಸುರಕ್ಷತಾ ಪ್ರಮಾಣಗಳನ್ನು 10 ದಿನಗಳ ಗಡುವಿನೊಳಗೆ ಪಡೆಯುವಂತೆ ಸೂಚಿಸಿದೆ. ಇಂದಿಗೂ ಇಲಾಖೆಯಿಂದ ಸರಿಯಾದ ಮಾರ್ಗಸೂಚಿ ಇಲ್ಲದಿರುವುದರಿಂದ ಭ್ರಷ್ಟ ಅಧಿಕಾರಿಗಳು ಹಣ ಮಾಡಿ ಪ್ರಮಾಣ ಪತ್ರ ನೀಡಲು ದಾರಿ ಮಾಡಿಕೊಟ್ಟಂತಾಗಿದೆ.

ಇಲಾಖೆ ಪ್ರಮಾಣ ಪತ್ರ ನೀಡುವ ಮಾರುಕಟ್ಟೆಯಾಗಿ ಮಾರ್ಪಟ್ಟಿದೆ. ಇಲಾಖೆಯ ಕಿರುಕುಳವನ್ನು ಸಹಿಸಲಾಗದೆ, ಗ್ರಾಮೀಣ ಪ್ರದೇಶದ ಕೆಲವು ಶಾಲೆಗಳು, ಹಾಗೂ ಮಠಾಧೀಶರು ನಡೆಸುತ್ತಿರುವ ಸುಮಾರು 10,000 ಶಾಲೆಗಳು ಸೇರಿದಂತೆ ಸಣ್ಣ ಮತ್ತು ಮಧ್ಯಮ ಶಾಲೆಗಳು ಮುಚ್ಚುವ ಹಂತದಲ್ಲಿವೆ ಎಂದು ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...