ಬೆಂಗಳೂರು: ಕೇವಲ ಸಿಎಂ ಹಾಗೂ ಡಿಸಿಎಂ ಮಾತ್ರ ಸಮರ್ಥಿಸಿದ್ರೆ ಸಾಕಾಗಲ್ಲ ಸರ್ಕಾರವನ್ನು ನೀವೂ ಸಮರ್ಥನೆ ಮಾಡಿಕೊಳ್ಳಿ ಎಂದು ರಾಜ್ಯ ಕಾಂಗ್ರೆಸ್ಸಿನ ಶಾಸಕರು, ಸಚಿವರಿಗೆ ಹೈಕಮಾಂಡ್ ಸೂಚನೆ ನೀಡಿದ್ದಾರೆ. ವಿವಾದ ಹಾಗೂ ಗೊಂದಲಗಳ ಸಂದರ್ಭದಲ್ಲಿ ಸಿಎಂ ಹಾಗೂ ಡಿಸಿಎಂ ಬೆಂಬಲಕ್ಕೆ ನಿಲ್ಲಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ವಿರೋಧ ಪಕ್ಷಗಳ ತಂತ್ರಗಾರಿಕೆಗೆ ತಕ್ಕ ಕೌಂಟರ್ ಕೊಡಬೇಕು ಎಂದು ರಾಜ್ಯದ ಕಾಂಗ್ರೆಸ್ ಶಾಸಕರು, ಸಚಿವರಿಗೆ ಹೈಕಮಾಂಡ್ ತಾಕೀತು ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ಸಿನ ಶಾಸಕರು, ಸಚಿವರಿಗೆ ಹೈಕಮಾಂಡ್ ವಾರ್ನಿಂಗ್



