ರಾಜ್, ವಿಷ್ಣು, ಅಂಬಿ ಬಗ್ಗೆ ಶಿವಣ್ಣ ಅದೆಂಥಾ ಮಾತು ಆಡಿದ್ದಾರೆ ಗೊತ್ತಾ?

Date:

ಇಂದು ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್​ಕುಮಾರ್ ಅವರ ಜನ್ಮದಿನ ಇಂದು. ರಾಜ್ ಜನ್ಮದಿನ ಈ ಗಳಿಗೆಯಲ್ಲಿ ಕನ್ನಡ ಚಿತ್ರರಂಗದ 3 ಕಣ್ಣುಗಳಂತಿದ್ದ ಕಣ್ಮಣಿಗಳಾದ ಡಾ.ರಾಜ್​ಕುಮಾರ್, ಡಾ.ವಿಷ್ಣುವರ್ಧನ್, ಡಾ.ರೆಬೆಲ್ ಸ್ಟಾರ್ ಅಂಬರೀಶ್ ಅವರ ಬಗ್ಗೆ ಕರುನಾಡ ಚಕ್ರವರ್ತಿ ಡಾ.ಶಿವರಾಜ್​ಕುಮಾರ್ ಅವರು ಮಾತನಾಡಿದ್ದಾರೆ.
ಅಪ್ಪಾಜಿ (ಡಾ.ರಾಜ್), ವಿಷ್ಣುವರ್ಧನ್ ಅವ್ರು, ಅಂಬರೀಶ್ ಅವ್ರಲ್ಲಿ ಯಾರೂ ಹೆಚ್ಚು ಅಲ್ಲ, ಕಮ್ಮಿ ಅಲ್ಲ. ಈ ಮೂವರು ಲೆಜೆಂಡ್​ಗಳೇ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಮೂವರ ಸ್ಮಾರಕವೂ ಆಗಬೇಕು. ಯಾರ ಸ್ಮಾರಕ ಮೊದಲು ಆಗಬೇಕು ಎಂದಲ್ಲ. ಎಲ್ಲರ ಸ್ಮಾರಕವೂ ಆಗಬೇಕು. ಮೂವರ ಸ್ಮಾರಕವೂ ಒಂದೇ ಕಡೆ ಆದರೆ ಅದರಷ್ಟು ಸಂತೋಷದ ವಿಷಯ ಬೇರೊಂದಿಲ್ಲ ಎಂದು ಹೇಳಿದರು.
ಶಿವರಾಜ್​ ಕುಮಾರ್ ಅವರು ಮಾತ್ರವಲ್ಲದೆ ನಟಿ, ಮಂಡ್ಯದ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಕೂಡ ಮಾತಾಡಿದ್ದಾರೆ. ನಮಗೆ ಅಂಬರೀಶ್ ಅವರ ಸ್ಮಾರಕ ನಿಧಾನ ಆದರೂ ಪರವಾಗಿಲ್ಲ. ರಾಜ್​ಕುಮಾರ್ ಅವರ ಮತ್ತು ವಿಷ್ಣವರ್ಧನ್ ಅವರ ಸ್ಮಾರಕ ಮೊದಲು ಆಗಲಿ ಎಂದಿದ್ದಾರೆ.
ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ 5ನೇ ತಿಂಗಳ ಮಾಸಿಕ ಪೂಜೆ ಇತ್ತು. ಅದಕ್ಕಾಗಿ ಸುಮಲತಾ ಅಂಬರೀಶ್ ಅವರು ಕಂಠೀರವ ಸ್ಟೂಡಿಯೋಕ್ಕೆ ಅಂಬಿ ಸ್ಮಾರಕದ ಬಳಿ ಬಂದಿದ್ದರು. ಇದೇ ಸಂದರ್ಭದಲ್ಲಿ ಡಾ.ರಾಜ್​ಕುಮಾರ್ ಅವರ ಸ್ಮಾರಕದ ಬಳಿ ಹೋಗಿ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಅವರ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಬಂದಿದ್ದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...