ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

Date:

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

ಚಾಮರಾಜನಗರ: ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಮನೆಗೆ ಬಂದ ಕೆಲವೇ ಸಮಯದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಚಾಮರಾಜನಗರ ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ತಮ್ಮ ಮನೆಯಲ್ಲಿ ಈ ಘಟನೆ ಸಂಭವಿಸಿದೆ.

ಎಎಸ್ಐ ನಾಗನಾಯಕ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...