ರಾತ್ರೋ ರಾತ್ರಿ ತಮ್ಮ ನಿರ್ಧಾರವನ್ನೆ ಬದಲಿಸಿದ್ರಾ ಸಿಎಂ ಕುಮಾರಸ್ವಾಮಿ.?!

Date:

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಬೆಂಗಳೂರು ಕಾಂಗ್ರೆಸ್ ಶಾಸಕರು ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಡೇರಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಬೇಕಿದ್ದು, ಕಾಂಗ್ರೆಸ್ ಪಕ್ಷದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ, ಸಿಎಂ ಕುಮಾರಸ್ವಾಮಿ ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಕೆಲವು ಕಾಂಗ್ರೆಸ್ ಶಾಸಕರು ಗರಂ ಆಗಿದ್ದಾರೆ.

ಬೆಂಗಳೂರು ಡೇರಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ನರಸಿಂಹ ಮೂರ್ತಿ ಅವರನ್ನು ಡಿಸ್ಮಿಸ್ ಮಾಡಲಾಗಿದೆ.

ನಾಮಪತ್ರ ಸಲ್ಲಿಕೆಗೆ ಅವರಿಗೆ ಅವಕಾಶ ಇಲ್ಲದಂತಾಗಿದೆ. ಈ ಬೆಳವಣಿಗೆ ಹಿಂದೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಹೆಚ್.ಡಿ. ರೇವಣ್ಣ ಅವರ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಸಿಎಂ ಕುಮಾರಸ್ವಾಮಿ ಬೆಂಗಳೂರು ಡೇರಿ ವಿಚಾರದಲ್ಲಿಯೂ ಪ್ರತಿಷ್ಠೆ ಸಮರ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ದೂರಿದ್ದಾರೆನ್ನಲಾಗಿದೆ.

ಕಾಂಗ್ರೆಸ್ ಪಕ್ಷದವರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಮೊದಲಿಗೆ ಒಪ್ಪಿಕೊಂಡಿದ್ದ ಸಿಎಂ ಕುಮಾರಸ್ವಾಮಿ ರಾತ್ರೋ ರಾತ್ರಿ ನಿರ್ಧಾರ ಬದಲಿಸಿದ್ದು, ಕಾಂಗ್ರೆಸ್ ಶಾಸಕರ ಸಿಟ್ಟು ಕಟ್ಟಿಕೊಂಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...