ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ವೋಲ್ಲೋ ಬಸ್ಸಿನಲ್ಲಿ ಪ್ರಯಾಣಿಸಿದ್ದ ಶಂಕಿತ ಉಗ್ರ

Date:

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟು ಪರಾರಿಯಾಗಿರುವ ಬಾಂಬರ್‌ ಬಿಎಂಟಿಸಿ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಸಿದ ದೃಶ್ಯ ಈಗ ಸೆರೆಯಾಗಿದೆ. ಬೆಳಗ್ಗೆ 11:32ಕ್ಕೆ ರಾಮೇಶ್ವರಂ ಕೆಫೆಯನ್ನು ಪ್ರವೇಶಿಸಿ ರವೆ ಇಡ್ಲಿಯನ್ನು ಖರೀದಿಸುತ್ತಾನೆ. ಕೇವಲ 9 ನಿಮಿಷದಲ್ಲಿ ರವೆ ಇಡ್ಲಿ ತಿಂದ ಬಾಂಬರ್‌ ಬಂಬ್‌ ಇಟ್ಟು 11:41ಕ್ಕೆ ಕೆಫೆಯಿಂದ ತೆರಳುತ್ತಾನೆ. ನಂತರ ಈತ‌ ಕುಂದಲಹಳ್ಳಿಯಿಂದ ಕಾಡುಗೋಡಿಗೆ ಹೋಗುವ ವೋಲ್ವೋ ಬಸ್ಸು ಹತ್ತಿದ್ದಾನೆ.
KA 01 F 4517 ನಂಬರಿನ ಬಸ್‌ ಹತ್ತಿ ನಂತರ ಮಧ್ಯ ಭಾಗಕ್ಕೆ ಬಂದಿದ್ದಾನೆ. ಮಧ್ಯ ಭಾಗಕ್ಕೆ ಬಂದ ನಂತರ ಬಸ್ಸಿನಲ್ಲಿ ಸಿಸಿಟಿವಿ ಇರುವುನ್ನು ನೋಡುತ್ತಾನೆ. ಮಧ್ಯ ಭಾಗದಲ್ಲಿ ಕುಳಿತುಕೊಂಡರೆ ನಾನು ಸೆರೆಯಾಗುತ್ತೇನೆ ಎಂಬುದನ್ನು ಅರಿತ ಆರೋಪಿ ಮುಂದುಗಡೆ ಡ್ರೈವರ್‌ ಬಳಿ ಇರುವ ಸೀಟಿನಲ್ಲಿ ಕುಳಿತುಕೊಂಡಿದ್ದಾನೆ. ಸಾಧ್ಯವಾದಷ್ಟು ಆತುರ ಆತುರವಾಗಿಯೇ ಬಸ್ಸಿನಲ್ಲಿ ಬಾಂಬರ್ ಓಡಾಡಿದ್ದಾನೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...