ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬ್ಯುಸಿನೆಸ್ʼಗೂ ಆಗಿರಬಹುದು !

Date:

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ. ‘ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬ್ಯುಸಿನೆಸ್ʼಗೂ ಆಗಿರಬಹುದು, ಬಿಜೆಪಿಯವರಿಗೆ ಕೇವಲ ಹಿಂದೂ, ಮುಸ್ಲಿಮರು ಮಾತ್ರ ಕಾಣುತ್ತಿದ್ದಾರೆ. ಈ ಹಿಂದೆ ನಡೆದ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡ ಇದೆ.
ಆದರೆ, ರಾಮೇಶ್ವರಂ ಕೆಫೆ ಸ್ಫೋಟ ಕೇಸ್ನಲ್ಲಿ ಬಿಜೆಪಿ ಕೈವಾಡ ಎಂದು ಹೇಳಲ್ಲ. ಈ ಹಿಂದೆ ಇಂತಹದ್ದೇ ಘಟನೆಗಳಾದಾಗ ಬಿಜೆಪಿಯ ಕೈವಾಡ ಇತ್ತು. ಇದು ತನಿಖೆಯಲ್ಲಿ ಸಾಬೀತು ಕೂಡ ಆಗಿದೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ಇನ್ನು ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರ ಬರುತ್ತದೆ ಎಂದಿದ್ದಾರೆ.
ಇನ್ನೂ ಜಾತಿ ಗಣತಿ ವಿಚಾರ, ‘ಈ ವರದಿಯನ್ನ ತೆಗದುಕೊಳ್ಳಬೇಡಿ ಎಂದು ನಾವು ಹೇಳಿಲ್ಲ, ಸಿಎಂ ಅವರಿಗೆ ಮನೆ ಮನೆಗೆ ಹೋಗಿ ವರದಿ ಮಾಡಿಲ್ಲ, ಈ ರೀತಿ ಆಗಿರುವಂತ ಲೋಪದೋಷಗಳನ್ನು ಸರಿ ಪಡಿಸುವಂತೆ ಸ್ವಾಮೀಜಿಗಳು ಹಾಗೂ ನಮ್ಮ ಸಮುದಾಯದ ಮುಖಂಡರು ಮನವಿ ಕೊಟ್ಟಿದ್ದರು. ಈ ಕುರಿತಾಗಿ ಮುಖ್ಯಮಂತ್ರಿಗಳು ‘ವರದಿ ಬರಲಿ, ವ್ಯತ್ಯಾಸಗಳು ಇದ್ದರೆ ಸರಿಪಡಿಸೋಣ ಎಂದು ಹೇಳಿದ್ದಾರೆ. ಅದಕ್ಕೆ ವರದಿಯಲ್ಲಿನ ಲೋಪದೋಷಗಳು ಇದ್ರೆ ಸರಿಪಡಿಸುತ್ತಾರೆ ಎಂಬ ವಿಶ್ವಾಸ ನಮಗೆಲ್ಲ ಇದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...