ಕಲಬುರಗಿ: ಸಾರ್ವತ್ರಿಕ ಚುನಾವಣೆ ಫಲಿತಾಂಶಗಳ ನಂತರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ ಎಂದು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ವರು, ಚುನಾವಣಾ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗಳನ್ನು ಗಮನಿಸಿದರೆ ವೈಯಕ್ತಿಕ ಪ್ರತಿಷ್ಠೆಯ ಪೈಪೊಟಿ ತೀವ್ರಗೊಂಡಿರುವುದು ಸ್ಪಷ್ಟವಾಗುತ್ತದೆ.
ಸಾರ್ವತ್ರಿಕ ಚುನಾವಣೆ ಫಲಿತಾಂಶಗಳ ನಂತರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ, ಅದರ ಜೊತೆಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಎರಡು ಹೋಳಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಬೊಮ್ಮಾಯಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಲವಾರು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಷೆಯ ಮತ್ತೊಂದು ಪ್ರತೀಕ ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಅಂತ ಅವರಿಗೆ ಗೊತ್ತಿದೆ ಎಂದು ಬೊಮ್ಮಾಯಿ ಹೇಳಿದರು.
ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಎರಡು ಹೋಳಾದರೂ ಆಶ್ಚರ್ಯಪಡಬೇಕಿಲ್ಲ !
Date: