ಭೂಪಾಲ್: ರಾಷ್ಟ್ರೀಯ ಚೆಸ್ ಆಟಗಾರ ಕುಲದೀಪ್ ಚೌಹಾನ್ ಅವಕಾಶಗಳ ಕೊರತೆ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಲೇಜಿನ ಎದುರು ಚಹಾ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.
ನನಗೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಸಿಗುತ್ತಿಲ್ಲ. ಮನೆಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ, ಹಾಗಾಗಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಆರ್ಥಿಕ ಪರಿಸ್ಥಿತಿಯಿಂದಾಗಿ ಇಡೀ ಜೀವನವನ್ನು ಆಟಕ್ಕಾಗಿ ಮುಡಿಪಾಗಿಡಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಕುಲದೀಪ್ ಚೌಹಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ಕುಲದೀಪ್ ಚೌಹಾನ್ ಮಧ್ಯಪ್ರದೇಶದ ಕಾಲೇಜ್ವೊಂದರ ಎದುರು ಟೀ ಮಾರಾಟ ಮಾಡುತ್ತಿರುವ ಫೆÇೀಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅವಕಾಶ ಸಿಗದ ಕಾರಣ ಇಂತಹ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
ಭಾರತದಲ್ಲಿ ಅಸಂಖ್ಯಾತ ಪ್ರತಿಭೆಗಳು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಅವಕಾಶದಿಂದ ವಂಚಿತರಾಗುತ್ತಿದ್ದವರ ಸಾಲಿಗೆ ಮಧ್ಯಪ್ರದೇಶದ ರಾಷ್ಟ್ರೀಯ ಚೆಸ್ ಆಟಗಾರ ಕುಲದೀಪ್ ಚೌಹಾನ್ ಅವರ ಹೆಸರು ಕೇಳಿ ಬಂದಿದೆ.
ಟ್ವಿಟ್ಟರ್ನಲ್ಲಿ ಟೀ ಮಾರುತ್ತಿರುವ ಫೋಟೋಗಳು ಹರಿದಾಡುತ್ತಿದ್ದಂತೆ ಅನೇಕರು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಟ್ಯಾಗ್ ಮಾಡಿ ಆಟಗಾರನ ಬಗ್ಗೆ ಗಮನ ಹರಿಸಿ ಸಹಾಯ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.