ರಾಹುಲ್ ಗಾಂಧಿಗೆ ಹರ್ ಸೀಮ್ರತ್ ಫುಲ್ ಕ್ಲಾಸ್

Date:

ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿ ಇಂದು(ಜ.15-ಶುಕ್ರವಾರ) ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯನ್ನು ಮಾಜಿ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಟೀಕಿಸಿದ್ದಾರೆ.

ಕೃಷಿ ಕಾಯ್ದೆ ಹಾಗೂ ಪಂಜಾಬ್ ರೈತರ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆರೋಪಿಸಿರುವ ಹರ್‌ಸಿಮ್ರತ್ ಕೌರ್, ಕೃಷಿ ಕಾಯ್ದೆಗಳು ಸಂಸತ್ತಿನ ಅನುಮೋದನೆ ಪಡೆಯುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್ ರೈತರು ಧರಣಿ ನಡೆಸುತ್ತಿರುವಾಗ ರಾಹುಲ್ ಎಲ್ಲಿದ್ದರು, ರಾಜ್ಯಸಭೆಯಲ್ಲಿ ಮಸೂದೆ ಪಾಸಾಗುವ ವೇಳೆ 40 ಕಾಂಗ್ರೆಸ್ ಸದಸ್ಯರು ಗೈರು ಹಾಜರಾಗಿದ್ದೇಕೆ ಎಂದು ಪ್ರಶ್ನಿಸಿರುವ ಹರ್‌ಸಿಮ್ರತ್ ಕೌರ್ ಬಾದಲ್, ರೈತರಿಗಾಗಿ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಿ ಎಂದು ರಾಹುಲ್ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ.

ಇದೇ ವೇಳೆ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟಿಸುತ್ತಿರುವ ಪಂಜಾಬ್ ರೈತರನ್ನು ಖಲಿಸ್ತಾನಿಗಳು ಎಂದು ಕರೆಯುತ್ತಿರುವ ಕುರಿತು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಹರ್‌ಸಿಮ್ರತ್ ಕೌರ್ ಬಾದಲ್ ಈ ಕುರಿತೂ ರಾಹುಲ್ ಗಾಂಧಿ ಅವರನ್ನು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಟಾಚಾರಕ್ಕೆ ಪತ್ರಿಕಾಗೋಷ್ಠಿ ಮಾಡಿ ಪಂಜಾಬ್ ರೈತರ ಕುರಿತು ಮೊಸಳೆ ಕಣ್ಣೀರು ಸುರಿಸುವ ಮೊದಲು, ನಿಮ್ಮ ಅಜ್ಜಿ(ಇಂದಿರಾ ಗಾಂಧಿ) ಕೂಡ ಪಂಜಾಬಿಗಳ ಕುರಿತು ಇದೇ ಭಾಷೆಯನ್ನು ಬಳಸುತ್ತಿದ್ದರು ಎಂಬುದನ್ನು ನೆನೆಪಸಿಕೊಳ್ಳಿ ಎಂದು ಹರ್‌ಸಿಮ್ರತ್ ಕೌರ್ ಬಾದಲ್ ರಾಹುಲ್ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ

ನಿಮ್ಮ ತಂದೆ(ರಾಜೀವ್ ಗಾಂಧಿ)ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಂಜಾಬಿಗಳ ಮಾರಣಹೋಮ ನಡೆಯಲು ಏಕೆ ಬಿಟ್ಟರು ಎಂಬುದನ್ನು ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಹರ್‌ಸಿಮ್ರತ್ ಕೌರ್ ಬಾದಲ್ ಆಗ್ರಹಿಸಿದ್ದಾರೆ.

ನಿಮ್ಮ ತಂದೆ(ರಾಜೀವ್ ಗಾಂಧಿ)ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಂಜಾಬಿಗಳ ಮಾರಣಹೋಮ ನಡೆಯಲು ಏಕೆ ಬಿಟ್ಟರು ಎಂಬುದನ್ನು ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಹರ್‌ಸಿಮ್ರತ್ ಕೌರ್ ಬಾದಲ್ ಆಗ್ರಹಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...