ರಾಹುಲ್ ಗಾಂಧಿಗೆ ಹರ್ ಸೀಮ್ರತ್ ಫುಲ್ ಕ್ಲಾಸ್

Date:

ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿ ಇಂದು(ಜ.15-ಶುಕ್ರವಾರ) ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯನ್ನು ಮಾಜಿ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಟೀಕಿಸಿದ್ದಾರೆ.

ಕೃಷಿ ಕಾಯ್ದೆ ಹಾಗೂ ಪಂಜಾಬ್ ರೈತರ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆರೋಪಿಸಿರುವ ಹರ್‌ಸಿಮ್ರತ್ ಕೌರ್, ಕೃಷಿ ಕಾಯ್ದೆಗಳು ಸಂಸತ್ತಿನ ಅನುಮೋದನೆ ಪಡೆಯುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್ ರೈತರು ಧರಣಿ ನಡೆಸುತ್ತಿರುವಾಗ ರಾಹುಲ್ ಎಲ್ಲಿದ್ದರು, ರಾಜ್ಯಸಭೆಯಲ್ಲಿ ಮಸೂದೆ ಪಾಸಾಗುವ ವೇಳೆ 40 ಕಾಂಗ್ರೆಸ್ ಸದಸ್ಯರು ಗೈರು ಹಾಜರಾಗಿದ್ದೇಕೆ ಎಂದು ಪ್ರಶ್ನಿಸಿರುವ ಹರ್‌ಸಿಮ್ರತ್ ಕೌರ್ ಬಾದಲ್, ರೈತರಿಗಾಗಿ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಿ ಎಂದು ರಾಹುಲ್ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ.

ಇದೇ ವೇಳೆ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟಿಸುತ್ತಿರುವ ಪಂಜಾಬ್ ರೈತರನ್ನು ಖಲಿಸ್ತಾನಿಗಳು ಎಂದು ಕರೆಯುತ್ತಿರುವ ಕುರಿತು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಹರ್‌ಸಿಮ್ರತ್ ಕೌರ್ ಬಾದಲ್ ಈ ಕುರಿತೂ ರಾಹುಲ್ ಗಾಂಧಿ ಅವರನ್ನು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಟಾಚಾರಕ್ಕೆ ಪತ್ರಿಕಾಗೋಷ್ಠಿ ಮಾಡಿ ಪಂಜಾಬ್ ರೈತರ ಕುರಿತು ಮೊಸಳೆ ಕಣ್ಣೀರು ಸುರಿಸುವ ಮೊದಲು, ನಿಮ್ಮ ಅಜ್ಜಿ(ಇಂದಿರಾ ಗಾಂಧಿ) ಕೂಡ ಪಂಜಾಬಿಗಳ ಕುರಿತು ಇದೇ ಭಾಷೆಯನ್ನು ಬಳಸುತ್ತಿದ್ದರು ಎಂಬುದನ್ನು ನೆನೆಪಸಿಕೊಳ್ಳಿ ಎಂದು ಹರ್‌ಸಿಮ್ರತ್ ಕೌರ್ ಬಾದಲ್ ರಾಹುಲ್ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ

ನಿಮ್ಮ ತಂದೆ(ರಾಜೀವ್ ಗಾಂಧಿ)ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಂಜಾಬಿಗಳ ಮಾರಣಹೋಮ ನಡೆಯಲು ಏಕೆ ಬಿಟ್ಟರು ಎಂಬುದನ್ನು ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಹರ್‌ಸಿಮ್ರತ್ ಕೌರ್ ಬಾದಲ್ ಆಗ್ರಹಿಸಿದ್ದಾರೆ.

ನಿಮ್ಮ ತಂದೆ(ರಾಜೀವ್ ಗಾಂಧಿ)ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಂಜಾಬಿಗಳ ಮಾರಣಹೋಮ ನಡೆಯಲು ಏಕೆ ಬಿಟ್ಟರು ಎಂಬುದನ್ನು ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಹರ್‌ಸಿಮ್ರತ್ ಕೌರ್ ಬಾದಲ್ ಆಗ್ರಹಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...