ರೆಸಾರ್ಟ್ ನಿಂದ ಹೊರ ಹೋಗುವಾಗಲೇ ಸಿಕ್ಕಿಬಿದ್ದ ಕಾಂಗ್ರೆಸ್ ಶಾಸಕ..!?

Date:

ರೆಸಾರ್ಟ್ ನಿಂದ ಹೊರ ಹೋಗಲು ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಪ್ರಯತ್ನ ನಡೆಸಿದ್ದಾರೆ. ದೇವನಹಳ್ಳಿ ಸಮೀಪದ ಪ್ರಕೃತಿ ರೆಸಾರ್ಟ್ ನಿಂದ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಹೊರ ಹೋಗಲು ವಿಫಲ ಯತ್ನ ನಡೆಸಿದ್ದಾರೆ.

ಸಂಗಮೇಶ್ ಸೇರಿದಂತೆ ಕಾಂಗ್ರೆಸ್ ಶಾಸಕರನ್ನೆಲ್ಲಾ ಕಳೆದ ವಾರದಿಂದ ರೆಸಾರ್ಟ್ ನಲ್ಲಿ ಇರಿಸಲಾಗಿದೆ. ಆಪರೇಷನ್ ಕಮಲ ಭೀತಿಯಿಂದಾಗಿ ಶಾಸಕರು ಒಂದೇ ಕಡೆ ಇರುವಂತೆ ನೋಡಿಕೊಳ್ಳಲಾಗಿದೆ.ಅಲ್ಲದೇ, ಶಾಸಕರ ಮೇಲೆ ನಿಗಾ ವಹಿಸಲಾಗಿದೆ.

ಪ್ರಕೃತಿ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದು, ಸಂಗಮೇಶ್ ಅಲ್ಲಿಂದ ಹೊರ ಹೋಗಲು ಯತ್ನಿಸಿದ್ದಾರೆ. ಅವರ ಹಿಂದೆ ಫಾಲೋ ಮಾಡಿದ ಕಾಂಗ್ರೆಸ್ ಮುಖಂಡರು ಸಂಗಮೇಶ್ ಪ್ರಯತ್ನ ವಿಫಲಗೊಳಿಸಿದ್ದಾರೆ.

ಅಲ್ಲಿಂದ ಹೋಗಲಾರದೆ ಸಂಗಮೇಶ್ ಒಳಗೆ ಆಗಮಿಸಿದ್ದಾರೆ. ರೆಸಾರ್ಟ್ ಒಳಗೆ ಮತ್ತು ಹೊರಗೆ ಹೋಗಲು ನಿರ್ಬಂಧ ಹೇರಲಾಗಿದೆ. ಆಯ್ದ ಮುಖಂಡರು, ಶಾಸಕರಿಗೆ ಮಾತ್ರ ಹೊರಗೆ, ಒಳಗೆ ಹೋಗಲು ಅವಕಾಶವಿದೆ. ಇಂತಹ ಸಂದರ್ಭದಲ್ಲಿ ಸಂಗಮೇಶ್ ಹೊರಗೆ ಹೋಗಲು ಯತ್ನಿಸಿದ್ದರಿಂದ ಅವರನ್ನು ಮುಖಂಡರು ತಡೆದಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...