ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Date:

ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಸದ್ಯ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಇನ್ನೂ ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ನಟ ದರ್ಶನ್ ಗೆ ಇಂದು ಕೂಡ ರಿಲೀಫ್ ಸಿಗದಂತೆ ಆಗಿದೆ. ಹೌದು ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಿದ್ದಾರೆ. ಆದ್ರೆ ಹೈಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಸ್ ವಿಶ್ವಚಿತ್ ಅವರನ್ನೊಳಗೊಂಡಂತ ನ್ಯಾಯಪೀಠವು ನಡೆಸಿತು. ಪ್ರಕರಣ ಸಂಬಂಧ ವರದಿಯನ್ನು ನೀಡಲು ನಿರ್ದೇಶಿಸಿದ್ದರಿಂದಾಗಿ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನಟ ದರ್ಶನ್ ಪ್ರಕರಣದ ವರದಿಯನ್ನು ಸಲ್ಲಿಸಿತು. ಈ ಬಳಿಕ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

Share post:

Subscribe

spot_imgspot_img

Popular

More like this
Related

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು...

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು: ರಾಜ್ಯದ...

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ ಮಧ್ಯಾಹ್ನ ಊಟದ ನಂತರ...

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು ಬೆಂಗಳೂರು:...