ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸ್ಯಾಂಡಲ್ ವುಡ್ ನಟ ಅರೆಸ್ಟ್

Date:

ಬೆಂಗಳೂರು: ನಟ ದರ್ಶನ್ ಅವರು ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದರ ಬೆನ್ನಲ್ಲೇ ಡಿ ಟೀಮ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಮತ್ತೊಬ್ಬ ಸ್ಯಾಂಡಲ್ ವುಡ್ ನಟ ಅರೆಸ್ಟ್ ಆಗಿದ್ದಾನೆ.
ಹೌದು ಎ 14 ಆರೋಪಿ ಪ್ರದೋಶ್ ಸ್ಯಾಂಡಲ್ ವುಡ್ ನಟ ಬಂಧನವಾಗಿದ್ದು, ದರ್ಶನ್ ಜೊತೆಗಿನ ಬೃಂದಾವನ,ಬುಲ್ ಬುಲ್ ಚಿತ್ರಗಳಲ್ಲಿ ನಟಿಸಿದ್ದರು. ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪ್ರದೋಶ್ ದರ್ಶನ್ ಹಿಂದೆ ಮುಂದೆ ಓಡಾಡಿಕೊಂಡಿದ್ದರು. ಇಷ್ಟೇ ಅಲ್ಲದೆ ಐಟಿ ಬ್ಯಾಕ್ ಗ್ರೌಂಡ್ ಇರೋ ಈತ ಬಿಜೆಪಿಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇನ್ನೂ ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪ ಸಾಬೀತಾದರೆ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...