ರೇಣುಕಾ ಸ್ವಾಮಿ ಕೊಲೆ ಪ್ರಕರಣ: ತಪ್ಪು ಯಾರು ಮಾಡಿದರೂ ತಪ್ಪೇ – ಸಚಿವ ಜಮೀರ್

Date:

ವಿಜಯಪುರ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚುರುಕಾಗಿ ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತಪ್ಪು ಯಾರು ಮಾಡಿದರೂ ತಪ್ಪೇ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿರುವ ನಟ ದರ್ಶನ್ ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿಲ್ಲ, ಅದರಲ್ಲೂ ವಿಶೇಷವಾಗಿ ತನ್ನ ವಿರುದ್ಧ ನಟನನ್ನು ಸಮರ್ಥಿಸಿಕೊಂಡಿರುವ ಬಗ್ಗೆ ವರದಿಗಳು ಮಾಧ್ಯಮಗಳಲ್ಲಿ ಕಾಣಿಸಿವೆ,
ಅದರೆ ಅದೆಲ್ಲ ಸತ್ಯಕ್ಕೆ ದೂರ ಎಂದು ಹೇಳಿದರು. ತನ್ನ ಮತ್ತು ದರ್ಶನ್ ನಡುವೆ ಸ್ನೇಹವಿರೋದು ಸತ್ಯ, ಅದರೆ ಇಂಥ ಕೆಲಸಗಳನ್ನು ಮಾಡಿದರೆ ಯಾರಾದರೂ ಜೊತೆಯಾಗಿ ನಿಂತುಕೊಳ್ಳುತ್ತಾರೆಯೇ? ಎಂದು ಹೇಳಿದ ಜಮೀರ್, ತಪ್ಪು ಯಾರು ಮಾಡಿದರೂ ತಪ್ಪೇ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದರು. ಬೇರೆ ಬೇರೆ ಶಾಸಕರು ವ್ಯಕ್ತಡಿಸಿರುವ ಅಭಿಪ್ರಾಯಗಳಿಗೆ ತಾನು ಬಾಧ್ಯಸ್ಥನಲ್ಲ, ಕಾನೂನಿನ ಚೌಕಟ್ಟಿನೊಳಗೆ ತನಿಖೆ ನಡೆಯುತ್ತಿದೆ ಮತ್ತು ಇವತ್ತು ಅವರನ್ನು ಜೈಲಿಗೂ ಕಳಿಸಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...