ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿಗೆ ನಟ ದರ್ಶನ್ ಆಗಮನ

Date:

 

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ. ನಿಯಮದ ಪ್ರಕಾರ ರಾತ್ರಿ ವೇಳೆ ವಿಚಾರಣಾದೀನ ಕೈದಿಗಳನ್ನು ಸ್ಥಳಾಂತರ ಮಾಡುವಂತಿಲ್ಲ. ಆದ್ರೆ ಭದ್ರತಾ ದೃಷ್ಟಿಯಿಂದ ದರ್ಶನ್ರನ್ನು ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಹೊರಟಿದ್ದರು. ಇದೀಗ ದರ್ಶನ್ ಅವರನ್ನು ಕರೆದುಕೊಂಡು ಹೊರಟಿದ್ದ ಪೊಲೀಸ್ ವಾಹನ ಬಳ್ಳಾರಿ ಜೈಲು ತಲುಪಿವೆ. ದರ್ಶನ್ ಬಳ್ಳಾರಿ ಜೈಲು ಸೇರಿದ್ದಾರೆ.
ಬೊಲೆರೋ ವಾಹನದಲ್ಲಿ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ಕರೆದೊಯ್ಯಲಾಗಿದೆ. ಇತ್ತೀಚೆಗೆ ದರ್ಶನ್ ಅವರು ಜೈಲಿನಲ್ಲಿ ಸಿಗರೇಟ್ ಸೇದಿದ್ದ ಫೋಟೋ ವೈರಲ್ ಆಗಿತ್ತು. ಈ ಫೋಟೋದಿಂದ ಸರ್ಕಾರಕ್ಕೆ ತಲೆನೋವಾಗಿತ್ತು. ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗಿದೆ.

́

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...