No menu items!
30.6 C
Munich
Wednesday, August 12, 2026

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿಕೆ

Must read

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಹಾಜದ್ದಾರೆ. ಇನ್ನೂ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ.
ಹೌದು ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್‌ಗೆ ಹಾಜರಾಗಿದ್ದರು ಆರೋಪಿಗಳು. ದರ್ಶನ್, ಪವಿತ್ರಾಗೌಡ ಸೇರಿ ಪ್ರಕರಣದ 17 ಆರೋಪಿಗಳು. ಹಾಜರಾಗಿದ್ದರು. ಆದರೆ 17 ರಲ್ಲಿ 15 ಜನ ಆರೋಪಿಗಳು ಇದ್ದರು.
ಸಿಸಿಎಚ್ 57ನೇ ಕೋರ್ಟ್‌ಗೆ ದರ್ಶನ್, ಪವಿತ್ರಾಗೌಡ, ಪುಟ್ಟಸ್ವಾಮಿ, ವಿನಯ್, ನಾಗರಾಜ್ ಪ್ರದೂಷ್, ದೀಪಕ್ ರಾಘವೇಂದ್ರ, ಕಾರ್ತಿಕ್, ಕೇಶವಮೂರ್ತಿ ಅನುಕುಮಾರ್ ಹಾಜಾರಾಗಿದ್ದು, 16,17 ನೇ ಆರೋಪಿಗಳಾದ ನಿಖಿಲ್, ಕೇಶವಮೂರ್ತಿ ಗೈರಾಗಿದ್ದರು.
ಸಿಸಿಎಚ್ 57 ನೇ ಕೋರ್ಟ್ ಏಪ್ರಿಲ್ 8 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಇನ್ನು ಪೊಲೀಸರ ವಿರುದ್ದ ದರ್ಶನ್ ಪರ ವಕೀಲ ಸುನೀಲ್ ಕುಮಾರ್ ವಾದ ಮಾಡಿ ಆರೋಪ ಮಾಡಿದ್ದು ಹೀಗೆ. ಇತರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗುವಂತೆ ಒತ್ತಾಯ ಮಾಡುತ್ತಿದ್ದಾರೆ. ಮಾಫಿ ಸಾಕ್ಷಿ ಆಗುವಂತೆ ಪೊಲೀಸರ ಒತ್ತಡ ಎಂದು ಆರೋಪಿಸಿದರು. ತಮ್ಮ ಬಳಿ ಸಾಕ್ಷಿ ಇದೆ ಎಂದು ಹೈಕೋರ್ಟ್ ನಲ್ಲಿ ವಾದಿಸಿದ್ದಾರೆ.

- Advertisement -spot_img

More articles

- Advertisement -spot_img

Latest article