ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ: ಸಿಎಮ ಸಿದ್ದರಾಮಯ್ಯ

Date:

ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ: ಸಿಎಮ ಸಿದ್ದರಾಮಯ್ಯ

ಬೆಮಗಳೂರು: ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ “ವಿಜಯ ಕರ್ನಾಟಕ” ಪತ್ರಿಕೆ ಆಯೋಜಿಸಿದ್ದ “ಸೂಪರ್ ಸ್ಟಾರ್ ರೈತ” ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕ ರೈತರನ್ನು ಪುರಸ್ಕರಿಸಿ ಮಾತನಾಡಿದರು.
ಸಾಮಾಜಿಕ ನ್ಯಾಯ, ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ ಜನತೆಗೆ ಮನವರಿಕೆಯಾಗಿದೆ ಎಂದರು.
ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿಗೆ 26000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ ಎಂದು ರೈತ ಸಮಾಜವನ್ನು ಪ್ರಶ್ನಿಸಿದರು.
ಇಂಥಾ ಹೊತ್ತಲ್ಲಿ ರೈತ ಸಾಧಕರನ್ನು ಗುರುತಿಸಿ ಕರೆದು ಸನ್ಮಾನಿಸುತ್ತಿರುವುದು ಅತ್ಯಂತ ಪ್ರೋತ್ಸಾಹದಾಯಕ. ಸಮಗ್ರ ಕೃಷಿಯನ್ನು ಮಾಡದ ಹೊರತು ಕೃಷಿ ಲಾಭದಾಯಕವಲ್ಲ. ಜನಸಂಖ್ಯೆ ಬೆಳೆಯುತ್ತಿದೆ. ನಮ್ಮ ರಾಜ್ಯದಲ್ಲಿ ರಾಜಸ್ತಾನದ ನಂತರ ಅತಿ ಹೆಚ್ಚು ಒಣ ಕೃಷಿ ಭೂಮಿ ಹೆಚ್ಚು ಹೊಂದಿದೆ ಎಂದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...