ರೈಲು ಅಪಘಾತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

Date:

ಪಶ್ಚಿಮ ಬಂಗಾಳದ ಜುಲ್ವೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕನೇರ್-ಗುವಾಹಟಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೇರಿದೆ ಎಂದು ಈಶಾನ್ಯ ಗಡಿ ರೈಲ್ವೈ (ಎನ್‍ಎಫ್‍ಆರ್) ವಕ್ತಾರರು ಇಂದಿಲ್ಲಿ ತಿಳಿಸಿದ್ದಾರೆ. ಮೃತರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ನಿನ್ನೆ ಜಲ್ವೈಗುರಿ ಜಿಲ್ಲೆಯಲ್ಲಿ ಚಿಕನೇರ್-ಗುವಾಹಟಿ ಎಕ್ಸ್‍ಪ್ರೆಸ್ ರೈಲಿನ ಹನ್ನೆರಡು ಬೋಗಿಗಳು ಹಳಿ ತಪ್ಪಿದವು. ಅವುಗಳಲ್ಲಿ ಕೆಲವು ಬುಡಮೇಲಾಗಿ ಬಿದ್ದವು. ಘಟನೆ ಡೋಮೋಹನಿ ಸಮೀಪ ಜರುಗಿತ್ತು.

ಪ್ರಸ್ತುತ ಗಾಯಗೊಂಡವರ ಸಂಖ್ಯೆ 36 ಇದೆ. 23 ಪ್ರಯಾಣಿಕರು ಜಲ್ವೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರು ಮಂದಿಯನ್ನು ನಾರ್ತ್‍ಬೆಂಗಾಲ್ ಮೆಡಿಕಲ್ ಕಾಲೇಜ್ ಮತ್ತು ಏಳು ಜನರನ್ನು ಮೈನಗುರಿ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...