No menu items!
11.1 C
Munich
Wednesday, April 29, 2026

ರೋಹಿಣಿ ಸಿಂಧೂರಿಗೆ ಸಂಕಷ್ಟ!

Must read

ಮೈಸೂರು: ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಂದು ಕಡೆ ಶಾಸಕ ಸಾರಾ ಮಹೇಶ್, ಡಿಸಿ ಅಧಿಕೃತ ಸರಕಾರಿ ನಿವಾಸ ನವೀಕರಣ ಸಂಬಂಧ ನೀಡಿದ್ದ ದೂರಿನ ವಿಚಾರಣೆಗೆ ಆದೇಶವಾಗಿದ್ದರೆ ಮತ್ತೊಂದು ಕಡೆ ಚಾಮರಾಜನಗರದಲ್ಲಿನ ನಡೆದಿದ್ದ ಆಕ್ಸಿಜನ್ ಸಾವು ಪ್ರಕರಣದಲ್ಲಿ ದೂರ ದಾಖಲಿಸಲು ಮನವಿ ಸಲ್ಲಿಕೆಯಾಗಿದೆ.

ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದ ನಡೆದಿದ್ದೆ ಎನ್ನಲಾಗುತ್ತಿರುವ ನವೀಕರಣ ವಿಚಾರದಲ್ಲಿ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಪ್ರಾದೇಶಿಕ ಆಯುಕ್ತರಿಗೆ ತನಿಖೆಗೆ ಆದೇಶಿಸಿದ್ದಾರೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಇಲ್ಲದೆ ಕಟ್ಟಡ ನವೀಕರಿಸಿ ನಿವಾಸದ ನೆಲ ಹಾಸಿಗೆಯ ನವೀಕರಣದ ಮಾಡಲಾಗಿದೆ ಎಂದು ಶಾಸಕ ಸಾರಾ ಮಹೇಶ್ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ 7 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಯಿಂದ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ಬಂದಿದೆ.

ಇನ್ನೊಂದೆಡೆ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಲರಣದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ತನಿಖಾಧಿಕಾರಿಗೆ ಚಾಮರಾಜನಗರದ ಮುಖಂಡ ಮಲ್ಲೇಶ್ ದೂರು ನೀಡಿದ್ದಾರೆ. ಅಫಿಡವಿಟ್ ಮಾಡಿಸಿದ ಮನವಿ ಪತ್ರ, ಪೆನ್‍ಡ್ರೈವ್ ಅನ್ನು ಆಕ್ಸಿಜನ್ ದುರಂತದ ತನಿಖೆಗಾಗಿ ಸರ್ಕಾರ ನೇಮಕ ಮಾಡಿರುವ ಬಿ.ಎ.ಪಾಟೀಲ್ ಸಮಿತಿಗೆ ಹಸ್ತಾಂತರಿಸಿದ್ದಾರೆ.

ಮುಖಂಡ ಮಲ್ಲೇಶ್ ಮಾತನಾಡಿ, ಐಪಿಸಿ ಕಾಯ್ದೆ 302 ಅಡಿಯಲ್ಲಿ ರೋಹಿಣಿ ಸಿಂಧೂರಿ ವಿರುದ್ದ ಕೊಲೆ ಪ್ರಕರಣ ದಾಖಲಿಸಬೇಕು. ಅವರ ಸ್ವತ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಮೃತ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article