No menu items!
18.8 C
Munich
Friday, June 19, 2026

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ

Must read

ಉಡುಪಿ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಲಂಚ ನೀಡಲು ಒಪ್ಪದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.

- Advertisement -spot_img

More articles

- Advertisement -spot_img

Latest article