ಲಕ್ಷ್ಮಣನನ್ನು ಕೊಂದಿದ್ದು ಸುಪಾರಿ ಹಂತಕ ಕ್ಯಾಟ್ ರಾಜ ?

Date:

ಕುಖ್ಯಾತ ರೌಡಿಶೀಟರ್‌ ಲಕ್ಷ್ಮಣನನ್ನು ಹಾಡಹಗಲೇ  ನಡುರಸ್ತೆಯಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆಗೈದ ರೌಡಿಶೀಟರ್‌, ಸುಪಾರಿ ಹಂತಕ ರಾಜ ಅಲಿಯಾಸ್‌ ಕ್ಯಾಟ್‌ ರಾಜ (31)ನ ಮಹಾಲಕ್ಷ್ಮೀ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ  ತಲೆಮರೆಸಿಕೊಂಡಿದ್ದ ಕ್ಯಾಟ್‌ ರಾಜನನ್ನು ಖಚಿತ ಮಾಹಿತಿ ಮೇರೆಗೆ ಶುಕ್ರವಾರ ತಡರಾತ್ರಿ 11.30ರ ಸುಮಾರಿಗೆ ಬಂಧಿಸಿದ್ದ ಮಹಾಲಕ್ಷ್ಮೀ ಲೇಔಟ್‌ ಪೊಲೀಸರು, ಶನಿವಾರ ಬೆಳಗ್ಗೆ ಕೊಲೆಯಾದ ಸ್ಥಳ ಹಾಗೂ ಇಸ್ಕಾನ್‌ ದೇವಾಲಯ ಸಮೀಪದ ಆರ್‌.ಜಿ. ಪ್ಯಾಲೆಸ್‌ ಹೋಟೆಲ್‌ನಲ್ಲಿ ಮಹಜರು ಮಾಡಿದ್ದರು.

ಲಕ್ಷ್ಮಣ ಹಾಗೂ ಆರ್‌.ಆರ್‌.ನಗರ ಪೊಲೀಸ್‌ ಠಾಣೆ ರೌಡಿಶೀಟರ್‌ ರೂಪೇಶ್‌ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ಪ್ರಕರಣವೊಂದರಲ್ಲಿ ಕ್ಯಾಟ್‌ ರಾಜ ಜೈಲು ಶಿಕ್ಷೆ ಅನುಭವಿಸುತ್ತಿದ್ದ. ಮತ್ತೂಂದೆಡೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ರೂಪೇಶ್‌ ಕೂಡ ಜೈಲು ಸೇರಿದ್ದ.

ಈ ವಿಚಾರ ತಿಳಿದ ಹೇಮಂತ್‌, ಜೈಲಿನಲ್ಲಿ ರೂಪೇಶ್‌ನನ್ನು ಭೇಟಿಯಾಗಿ ಲಕ್ಷ್ಮಣನ ಹತ್ಯೆಗೆ ಸಹಕಾರ ನೀಡುವಂತೆ ಕ್ಯಾಟ್‌ ರಾಜನ ಮನವೊಲಿಸುವಂತೆ ಹೇಳಿದ್ದ. ಅದರಂತೆ ರೂಪೇಶ್‌, ಕ್ಯಾಟ್‌ ರಾಜನಿಗೆ ಲಕ್ಷ್ಮಣನ ಹತ್ಯೆಗೆ ಸಹಕಾರ ನೀಡುವಂತೆ ಕೇಳಿಕೊಂಡಿದ್ದ. ಎಂದು ವಿಚಾರಣೆ ಬಳಿಕ ಪೊಲೀಸರಿಗೆ ತಿಳಿದ ಮಾಹಿತಿ .

ರೌಡಿ ಲಕ್ಷ್ಮಣ  ಚಲನವಲನಗಳನ್ನು ತಿಳಿದುಕೊಂಡ ನಂತರ ಈ ಸ್ಕೆಚ್ ಗೆ ಪ್ಲಾನ್ ಮಾಡಿದ್ದೇ ಆದರೆ ಒಂದೆರಡು ಕಡೆ ತಪ್ಪಿಸಿಕೊಂಡ .ಆದರೆ ಮೊನ್ನೆ ರಾಜಾಜಿನಗರ ಸಮೀಪದಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಕೊಚ್ಚಿ   ಕೊಂದಿದ್ದೆವೆ ಎಂದು ಪೊಲೀಸರಿಗೆ ಹೇಳಿದ್ದಾನೆ

Share post:

Subscribe

spot_imgspot_img

Popular

More like this
Related

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ ನವದೆಹಲಿ:...

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ ಬೆಂಗಳೂರು: ತಿನ್ನುವ...

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ ಬೆಂಗಳೂರು: ವಿಜಯ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ ಮಟ್ಟಕ್ಕೆ ಕುಸಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ...