ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು ಸಚಿವೆ

Date:

ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು ಸಚಿವೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶ ಕಾಂಗ್ರೆಸ್ ಸದಸ್ಯರೆಲ್ಲರು ಕಿಡಿ ಕಾರಿದ್ರು. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೇ ವಿಚಾರವಾಗಿ ಸಭಾಪತಿ ಹೊರಟ್ಟಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ನೀಡಿದ್ದಾರೆ.
ಸಭಾಪತಿ ಹೊರಟ್ಟಿ ಚೇಂಬರ್ನಲ್ಲಿ ಜಮಾಯಿಸಿದ ಕಾಂಗ್ರೆಸ್ ಸದಸ್ಯರು, ಸದನದಲ್ಲಿ ಕೀಳುಮಟ್ಟದ ಹಾಗೂ ತೀರ ಅವಮಾನಕರ ಪದ ಬಳಕೆ ಮಾಡಿದ್ದಾರೆ. ಸಭಾಪತಿ ಎದುರು ನೇರವಾಗಿ ತಮ್ಮ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ದೂರು ನೀಡಿದ್ರು. ಸಚಿವರ ಮಾತು ಕೇಳಿ ದಂಗಾದ ಸಭಾಪತಿ ಹೊರಟ್ಟಿ ತಕ್ಷಣ ಪರಿಷತ್ ಕಾರ್ಯದರ್ಶಿಯನ್ನ ಕರೆಸಿ ಮಾತನಾಡಿದ್ದಾರೆ. ಈ ವೇಳೆ ಸಭಾಪತಿ ಕಚೇರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು ರಾಮನಗರ:...

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ. ವಿಜಯೇಂದ್ರ

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ....

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...