ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಸೆ.14ಕ್ಕೆ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೂ ಸಮನ್ಸ್ ನೀಡಿದ್ದರು.
ಆದರೆ, ಅಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ತಮ್ಮ ಕ್ಷೇತ್ರದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ನವದೆಹಲಿ ಬದಲಾಗಿ ಬೆಳಗಾವಿ ಅಥವಾ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದರೆ ತಾವು ಹಾಜರಾಗುವುದಾಗಿ ಲಕ್ಷ್ಮೀಹೆಬ್ಬಾಳ್ಕರ್ ಮನವಿ ಮಾಡಿದ್ದರು.ಆದರೆ, ಅದಕ್ಕೆ ಇಡಿ ಅಧಿಕಾರಿಗಳು ಅನುಮತಿ ನೀಡದೆ ಇಂದು (ಸೆ.19) ವಿಚಾರಣೆಗೆ ಹಾಜರಾಗುವಂತೆ ಎರಡನೇ ಬಾರಿ ಸಮನ್ಸ್ ನೀಡಿದ್ದರು