No menu items!
14.9 C
Munich
Thursday, April 23, 2026

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

Must read

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಕಾರವಾರ: ಯುವಕರನ್ನು ಉಗ್ರ ಚಟುವಟಿಕೆಗೆ ಸೆಳೆಯುವ ಹಾಗೂ ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವಕನಿಗೆ ವಿಶೇಷ ಎನ್ಐಎ ನ್ಯಾಯಾಲಯ 10 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಸಯ್ಯದ್ ಎಂ. ಇದ್ರಿಸ್ ಎಂದು ಗುರುತಿಸಲಾಗಿದೆ. ಈತ ಯುವಕರನ್ನು ಉಗ್ರ ಚಟುವಟಿಕೆಗೆ ಪ್ರೇರೇಪಿಸುವುದರ ಜೊತೆಗೆ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿಸುವ ಸಂಚಿನಲ್ಲಿ ತೊಡಗಿದ್ದಾನೆ ಎಂಬ ಆರೋಪ ಸಾಬೀತಾಗಿದೆ. ಭಾರತೀಯ ದಂಡ ಸಂಹಿತೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ₹70,000 ದಂಡವನ್ನೂ ವಿಧಿಸಿದೆ.
ಈ ಪ್ರಕರಣವು 2020ರ ಏಪ್ರಿಲ್ನಲ್ಲಿ ಪಶ್ಚಿಮ ಬಂಗಾಳ ಪೊಲೀಸರಿಂದ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ಹಸ್ತಾಂತರಿಸಲಾಗಿತ್ತು. ತನಿಖೆ ವೇಳೆ ಎನ್ಐಎ ಶಿರಸಿಯಲ್ಲಿ ಸಯ್ಯದ್ ಇದ್ರಿಸ್ ಮತ್ತು ಜಮ್ಮು–ಕಾಶ್ಮೀರ ನಿವಾಸಿ ಅಲ್ತಾಫ್ ಅಹ್ಮದ್ ರಾಥರ್ ಅವರನ್ನು ಬಂಧಿಸಿತ್ತು.
ಆರೋಪಿಗಳು ತಾನಿಯಾ ಪರ್ವೀನ್ ಎಂಬ ಮಹಿಳೆಯೊಂದಿಗೆ ಸೇರಿಕೊಂಡು ಪಶ್ಚಿಮ ಬಂಗಾಳದಲ್ಲಿ ಲಷ್ಕರ್-ಎ-ತೈಬಾ ಸಂಘಟನೆಯ ಘಟಕ ಸ್ಥಾಪಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಇದಕ್ಕೂ ಮೊದಲು ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಬದೂರಿಯಾ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ತಾನಿಯಾ ಪರ್ವೀನ್ ಅವರನ್ನು ಪೊಲೀಸರು ಬಂಧಿಸಿದ್ದರು. ಶೋಧದ ವೇಳೆ ಕಾನೂನುಬಾಹಿರ ಸಾಹಿತ್ಯ ಸೇರಿದಂತೆ ಹಲವು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

- Advertisement -spot_img

More articles

- Advertisement -spot_img

Latest article