ಲಾಕ್‌ಡೌನ್ ನಡುವೆಯೂ ಬಸ್ ಹತ್ತಿದವರ ಕಥೆ ನೋಡಿ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ನಿಷೇಧವಿದ್ದರೂ ಬೆಂಗಳೂರಿನಿಂದ ಹೊರಟ ಕೆಎಸ್ಆರ್‌ಟಿಸಿ ಬಸ್‌ನ್ನು ಪೊಲೀಸರು ತಡೆದು ವಾಪಾಸ್ ಬೆಂಗಳೂರಿಗೆ ಕಳುಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ನಿಷೇಧವಿದ್ದರೂ, ಮಾಹಿತಿಯ ಕೊರತೆಯಿಂದ ಅಧಿಕಾರಿಗಳು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ ಹೊರಡಿಸಿದ್ದು, ಮಕ್ಕಳು- ಮಹಿಳೆಯರು ಸೇರಿದಂತೆ ಸುಮಾರು 22 ಪ್ರಯಾಣಿಕರು ಧರ್ಮಸ್ಥಳಕ್ಕೆ ತೆರಳಲು ಬಸ್ ಹತ್ತಿದ್ದರು. ಬಸ್ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಪ್ರವೇಶಿಸಿ ಕೊಕ್ಕಡ ಭಾಗ ತಲುಪುತ್ತಿದ್ದಂತೆಯೇ ಪೊಲೀಸರು ಬಸ್‌ನ್ನು ತಡೆ ಹಿಡಿದಿದ್ದಾರೆ. ಈ ವೇಳೆ ಪ್ರಯಾಣಿಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆದಿದೆ.

 

ಕೊನೆಗೆ ಬೆಳ್ತಂಗಡಿ ತಹಶೀಲ್ದಾರ ಸ್ಥಳಕ್ಕಾಗಮಿಸಿ, ದಕ್ಷಿಣ ಕನ್ನಡ ಜಿಲ್ಲೆಯ ನಿಯಮವನ್ನು ಮನವರಿಕೆ ಮಾಡಿ ಬಸ್‌ನ್ನು ವಾಪಾಸ್ ಬೆಂಗಳೂರಿಗೆ ಕಳುಹಿಸಿದ್ದಾರೆ. ಆದರೆ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಎಸ್ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ನಿಷೇಧವಿದ್ದರೂ, ಬಸ್ ಹೊರಡಿಸಿದ್ದರಿಂದ ನಾವು ಅತಂತ್ರರಾಗಿದ್ದೇವೆ. ಜಿಲ್ಲೆಗಳ ಅಧಿಕಾರಿಗಳ ನಡುವೆಯೇ ಮಾಹಿತಿ ವಿನಿಮಯ ಆಗುತ್ತಿಲ್ಲ. ಧರ್ಮಸ್ಥಳಕ್ಕೆ ಹೋಗಲು ಬಸ್ ಹತ್ತಿದರೆ ಈಗ ವಾಪಾಸ್ ಕಳುಹಿಸಿದ್ದಾರೆ. ಮಕ್ಕಳು-ಮಹಿಳೆಯರು ಇರುವುದರಿಂದ ತುಂಬಾ ತೊಂದರೆಯಾಗುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...