ಲಾಕ್‌ಡೌನ್ ಸುಳಿವು ನೀಡಿದ ಕಂದಾಯ ಸಚಿವ

Date:

ಸಿಲಿಕಾನ್ ಸಿಟಿ ಬೆಂಗಳೂರು ಮತ್ತೆ ಲಾಕ್ ಆಗುವುದು ಬಹುತೇಕ ಖಚಿತವಾಗಿದೆ. ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್, ಒಮಿಕ್ರಾನ್ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ನಿಯಮ ಜಾರಿಗೆ ಸರ್ಕಾರ ಮುಂದಾಗಿದೆ.

ಬೆಂಗಳೂರಿನಲ್ಲಿ ನಿನ್ನೆ 850 ಕೋವಿಡ್ ಪ್ರಕರಣ ದಾಖಲಾಗಿದ್ದರೆ ಇಂದು 900ಕ್ಕೂ ಹೆಚ್ಚು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ವಿದೇಶದಿಂದ ಆಗಮಿಸಿದ್ದ 6 ಜನರಲ್ಲಿ ಕೋವಿಡ್ ದೃಢಪಟ್ಟಿದ್ದು, ಒಮಿಕ್ರಾನ್ ಶಂಕೆ ಹಿನ್ನೆಲೆಯಲ್ಲಿ ಸೋಂಕಿತರ ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸಿಗೆ ರವಾನಿಸಲಾಗಿದೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಕೇಸ್ ಉಲ್ಬಣಗೊಳ್ಳುತ್ತಿದೆ. ಕೇಂದ್ರ ಸರ್ಕಾರ ಪಟ್ಟಿಮಾಡಿ ಕಳುಹಿಸಿರುವ ರೆಡ್ ಝೋನ್ ನಗರಗಳಲ್ಲಿ ಬೆಂಗಳೂರು ಕೂಡ ಇದೆ. ಹಾಗಾಗಿ ಕಠಿಣ ನಿಯಮದ ಜೊತೆಗೆ ಲಾಕ್ ಡೌನ್ ನಂತಹ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಕೂಡ ಇಲ್ಲದಿಲ್ಲ ಎಂದಿದ್ದಾರೆ.

ಕೋವಿಡ್ ಎರಡನೆ ಅಲೆ ಸಂದರ್ಭದಲ್ಲಿ ಕೊಂಚ ನಿರ್ಲಕ್ಷದಿಂದ ರಾಜ್ಯ ಹಾಗೂ ದೇಶದಲ್ಲಿ ಪರಿಸ್ಥಿತಿ ಕೈಮೀರಿ ಹೋಗುವ ಹಂತ ತಲುಪಿತು. ಸಂಭವಿಸಿದ ಸಾವು-ನೋವಿನ ಭೀಕರತೆ ಬಗ್ಗೆ ಎಲ್ಲರಿಗೂ ಅರಿವಿದೆ. ಹಾಗಾಗಿ ಈಗ ಮೊದಲೇ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಅಲರ್ಟ್ ಮಾಡಬೇಕಿದೆ. ಕಠಿಣ ನಿಯಮ ಜಾರಿಗೆ ತಂದರೆ ಜನರ ಸಾವು-ನೋವನ್ನು, ಆಸ್ಪತ್ರೆಗೆ ದಾಖಲಾಗುವುದನ್ನು ತಡೆಯಬಹುದು. ಸರ್ಕಾರದ ನಿಯಮ ಪಾಲನೆಗೆ ಜನರು ಸಹಕಾರ ನೀಡಬೇಕು. ಇಲ್ಲವಾದಲ್ಲಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಾದಂತೆ ದೆಹಲಿ, ಪಶ್ಚಿಮ ಬಂಗಾಳದಂತೆಯೇ ಇಲ್ಲಿಯೂ ಲಾಕ್ ಡೌನ್ ಜಾರಿ ಮಾಡಬೇಕಾಗುತ್ತದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...