ಲಿಗರ್ ಕುರಿತು ಸಿಟ್ಟಾದ ವಿಜಯ್ ದೇವರಕೊಂಡ

Date:

ತೆಲುಗಿನ ಸೆನ್ಸೇಷನ್ ಸ್ಟಾರ್ ವಿಜಯ್ ದೇವರಕೊಂಡ ಬಗ್ಗೆ ವಂದತಿಗಳು ಹರಿದಾಡುತ್ತಿರುವುದು ಹೊಸದೇನಲ್ಲ. ಡೇಟಿಂಗ್, ಸಿನಿಮಾ ವಿಚಾರವಾಗಿ ವಿಜಯ್ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಇದೀಗ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷೆಯ ಹೊಸ ಸಿನಿಮಾ ಲೈಗರ್ ಬಗ್ಗೆ ವದಂತಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರ್ಜುನ್ ರೆಡ್ಡಿ ನಟ ಗರಂ ಆಗಿದ್ದಾರೆ. ನಿರ್ದೇಶಕ ಪುರಿ ಜಗನ್ನಾಥ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಲೈಗರ್ ಸಿನಿಮಾ ಈಗಾಗಲೇ ಭಾರಿ ಕುತೂಹಲ ಹುಟ್ಟುಹಾಕಿದೆ. ಹಿಂದಿ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗುತ್ತಿರುವ ಲೈಗರ್ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಬಂಡವಾಳ ಹೂಡಿಸಿದ್ದಾರೆ.

ಪೋಸ್ಟರ್ ಮೂಲಕ ಕುತೂಹಲ ಮೂಡಿಸಿರುವ ಲೈಗರ್ ಯಾವಾಗ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ. ಈ ನಡುವೆ ಲೈಗರ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಲೈಗರ್ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. 200 ಕೋಟಿ ರೂಪಾಯಿಗೆ ಡೀಲ್ ಆಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.

ಇದನ್ನು ನೋಡಿ ಸಿಟ್ಟಾದ ವಿಜಯ್ ದೇವರಕೊಂಡ ಸ್ಕ್ರೀನ್ ಶಾಟ್ ಶೇರ್ ಮಾಡಿ ಸುದ್ದಿಯನ್ನು ತಳ್ಳಿಹಾಕಿದ್ದಾರೆ. “ಇದು ತೀರಾ ಕಡಿಮೆಯಾಯಿತು. ನಾನು ಚಿತ್ರಮಂದಿರಗಳಲ್ಲಿ ಇನ್ನು ಹೆಚ್ಚು ಗಳಿಕೆ ಮಾಡುತ್ತೇನೆ,” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಲೈಗರ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಮೊದಲ ಬಾರಿಗೆ ಪುರಿ ಜಗನ್ನಾಥ್ ಜೊತೆ ಸಿನಿಮಾ ಮಾಡುತ್ತಿದ್ದು, ಚಿತ್ರದ ಬಗ್ಗೆ ವಿಜಯ್ ಕೂಜ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಬಾಲಿವುಡ್ ನಟಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದಾರೆ. ಅನನ್ಯಾ ಪಾಂಡೆ, ವಿಜಯ್‌ಗೆ ನಾಯಕಿಯಾಗುವ ಮೂಲಕ ಮೊದಲ ಬಾರಿಗೆ ದಕ್ಷಿಣ ಭಾರತದ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...