ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

Date:

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಬೆಂಗಳೂರು: ನಗರದ ಬಾಗಲೂರು ವ್ಯಾಪ್ತಿಯಲ್ಲಿ ಮನೆ ಕೆಲಸದಾಕೆಯೇ ಲಿಫ್ಟ್‌ನಲ್ಲಿ ಶ್ವಾನದ ಮರಿಯನ್ನು ಬಡಿದು ಕೊಂದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಆರೋಪಿ ಪುಷ್ಪಲತಾಳನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಶ್ವಾನದ ಮಾಲೀಕಿ ರಾಶಿಕಾ ಅವರ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಾರಂಭದಲ್ಲಿ ನಾಯಿ ಸಾವಿನ ಕುರಿತು ಪುಷ್ಪಲತಾ ಬೇರೆ ಕಥೆ ಹೇಳಿದ್ದಳು.

ಅನುಮಾನಗೊಂಡು ಸಿಸಿ ಟಿವಿ ಪರಿಶೀಲಿಸಿದಾಗ ಲಿಫ್ಟ್‌ನಲ್ಲಿ ನಾಯಿ ಮರಿಯನ್ನ ಬಡಿದು ಕೊಂದಿದ್ದು ದೃಢಪಟ್ಟಿತ್ತು. ಪುಷ್ಪಲತಾಳನ್ನು ನಾಯಿಮರಿಯ ಆರೈಕೆಗಾಗಿಯೇ ಮಾಲಕಿ ರಾಶಿಕಾ ಅವರು ನೇಮಿಸಿದ್ದರು. ಇದಕ್ಕಾಗಿ ಆಕೆಗೆ ಮಾಸಿಕ 23,000-25,000 ರೂ. ಸಂಬಳ ಕೂಡ ನೀಡುತ್ತಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...