ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

Date:

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು:- ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಾಹಿತಿ ಬಾನು ಮುಷ್ತಾಕ್ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ. ಬಾನು ಮುಷ್ತಾಕ್‌ ಅವರ ಹಿಂದಿನ ಹೇಳಿಕೆಗೆ ನಮ್ಮ ವಿರೋಧ ಇತ್ತು. ಇಡೀ ರಾಜ್ಯದಲ್ಲಿ ಹಿಂದುತ್ವ ಪರಿಪಾಲಕರು ಯಾರೂ ಅವರ ಹೇಳಿಕೆ ಒಪ್ಪಲಿಲ್ಲ. ಇವತ್ತು ಅವರ ಭಾಷಣ ನೋಡಿ ನಮಗೆ ಸಂತೋಷ ಆಗಿದೆ ಎಂದರು.

ಮುಸ್ಲಿಂ ಹೆಣ್ಣು ಮಗಳು ಹಿಂದೂ ಹೆಣ್ಣುಮಗಳಂತೆ ಅರಿಶಿಣ ಬಣ್ಣದ ಸೀರೆಯುಟ್ಟು ಹೂ ಮುಡಿದು ದೇವಸ್ಥಾನಕ್ಕೆ ಬಂದು, ಆರತಿ ಬೆಳಗಿ, ಮಂಗಳಾರತಿ ತೆಗೆದುಕೊಂಡಿದ್ದಾರೆ. ಹಿಂದೂ ಸಂಸ್ಕೃತಿ ಪರವಾಗಿ ನಿಂತು ಅವರು ದಸರಾ ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು. ನಮಗೆ ಏನು ಬೇಕಿತ್ತೋ? ನಮ್ಮ ನಿರೀಕ್ಷೆ ಏನು ಇತ್ತೋ ಅದನ್ನು ಅವರು ಇವತ್ತು ಮಾಡಿದ್ದಾರೆ. ಹಿಂದೂ ಸಂಸ್ಕೃತಿಗೆ ಗೌರವ ಕೊಟ್ಟು ಬಾನು ಮುಷ್ತಾಕ್ ಇವತ್ತು ನಡೆದುಕೊಂಡಿದ್ದಾರೆ. ಹೀಗಾಗಿ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...