ಲೇಖಕಿ ಬಾನು ಮುಷ್ತಾಕ್ ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಲೇಖಕಿ ಬಾನು ಮುಷ್ತಾಕ್ ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ತಮ್ಮ ಹೃದಯದೀಪ ಕೃತಿ ಮೂಲಕ ಬಾನು ಮುಷ್ತಾಕ್ ಅವರು, ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತಸದ ವಿಷಯ ಎಂದು ಸಿಎಂ ತಿಳಿಸಿದ್ದಾರೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್.
ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದಸರಾ ನಡೆಯಲಿದ್ದು, ಈಗಾಗಲೇ ಮೈಸೂರಿನಲ್ಲಿ ದಸರಾ ಸಿದ್ಧತೆಗಳು ಬಿರುಸಿನಿಂದ ಸಾಗಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...