No menu items!
12.1 C
Munich
Saturday, September 12, 2026

ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ !

Must read

ಕೋಲಾರ : ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಕಣ್ಣಲ್ಲಿ ಹೊಳಪು ಕಾಣುತಿದ್ದೇವೆ ಎಂದು ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ. ಕೋಲಾರದಲ್ಲಿ ಮಾಡನಾಡಿದ ಅವರು, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಕಣ್ಣಲ್ಲಿ ಹೊಳಪು ಕಾಣುತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿದ್ದರಿಂದ ನಮಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಯಾವ ಕೊರತೆಯೂ ಇಲ್ಲ ಎಂದಿದ್ದಾರೆ.
ಈ ಬಾರಿ ಜನತಾದಳ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್‌ ಪಕ್ಷಕ್ಕೆ ನೇರವಾಗಿ ಲಾಭವಾಗಲಿದೆ ಎಂದು ನುಡಿದ ಬೈರತಿ ಸುರೇಶ್‌, ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದಲೂ ಬಿಜೆಪಿಯವರು ಇದು ಬಿದ್ದುಹೋಗುತ್ತದೆ ಎನ್ನುತ್ತಿದ್ದಾರೆ. ಬಿಜೆಪಿಯವರು ಹೇಳುವುದೆಲ್ಲ ಅಪ್ಪಟ ಸುಳ್ಳು ಎಂದರು.

- Advertisement -spot_img

More articles

- Advertisement -spot_img

Latest article