ಲೋಕಸಭೆ ಚುನಾವಣೆ 2024: ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ರಿಲೀಸ್

0
31

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ) ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಮೋದಿಯವರು ತಮ್ಮ ಭಾಷಣದಲ್ಲಿ ಯುವಕರು, ಮಹಿಳೆಯರು, ರೈತರು ಮತ್ತು ಬಡವರು ನಮ್ಮ ಸರ್ಕಾರದ ನಾಲ್ಕು ಜಾತಿಗಳು ಎಂದು ಆಗಾಗ ಪ್ರಸ್ತಾಪ ಮಾಡುತ್ತಿದ್ದರು. ಈ ನಾಲ್ಕು ವರ್ಗಗಳನ್ನು ಗುರಿಯಾಗಿಸಿ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬಿಜೆಪಿಯು ಪ್ರಣಾಳಿಕೆ ಸಮಿತಿಯನ್ನು ರಚಿಸಿತ್ತು. ಪ್ರಣಾಳಿಕೆಗೆ ಸಂಬಂಧಿಸಿದಂತೆ ದೇಶದ ಜನರ ಸಲಹೆಗಳನ್ನು ಪಡೆಯುವ ಕುರಿತಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಲಹೆ ನೀಡುವಂತೆ ಜನರಿಗೆ ತಿಳಿಸಿತ್ತು.