ವಯನಾಡು ಭೂಕುಸಿತ ದುರಂತ ಕೇಸ್: ಆರ್ಥಿಕ ನೆರವು ನೀಡಿದ ರಶ್ಮಿಕಾ!

Date:

ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಲಕ್ಷ ಲಕ್ಷ ಹಣವನ್ನು ಕೇರಳದ ಸಿಎಂ ಫಂಡ್‌ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಕೂಡ 10 ಲಕ್ಷ ನೀಡಿದ್ದಾರೆ.

ಅಲ್ಲದೇ ತಮಿಳು ನಟ ಸೂರ್ಯ, ಚಿಯಾನ್ ವಿಕ್ರಮ್, ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನೆರವಿಗೆ ಬಂದಿದ್ದಾರೆ.

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಕಾರ್ಯವೊಂದಕ್ಕಾಗಿ ಅತಿಥಿಯಾಗಿ ಕೇರಳಕ್ಕೆ ಆಗಮಿಸಿದ್ದರು. ಆಗ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರ ಪ್ರೀತಿ ನೋಡಿ ನಟಿ ಧನ್ಯವಾದ ತಿಳಿಸಿದ್ದರು. ಇದೀಗ ಕೇರಳದಲ್ಲಿ ಆಗಿರುವ ಭೂಕುಸಿತ ದುರಂತ ಕಂಡು ಅಲ್ಲಿನ ಸಿಎಂ ಫಂಡ್‌ಗೆ ನಟಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್, ಕೇರಳದ ಸಿಎಂ ಫಂಡ್‌ಗೆ 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ನೆರವಾಗಿದ್ದಾರೆ. ಸೂರ್ಯ ಮತ್ತು ಜ್ಯೋತಿಕಾ ದಂಪತಿ, ನಟ ಕಾರ್ತಿ ಜಂಟಿಯಾಗಿ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಸ್ಟಾರ್ ನಟ ಮಮ್ಮುಟ್ಟಿ ಮತ್ತು ಪುತ್ರ ದುಲ್ಕರ್ ಸಲ್ಮಾನ್ ಜೊತೆಯಾಗಿ 35 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಫಹಾದ್ ಫಾಸಿಲ್, ನಜ್ರಿಯಾ ಜೋಡಿ 25 ಲಕ್ಷ ರೂ. ದೇಣಿಗೆ ನೀಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವ ಅಭ್ಯಾಸ ಮಾಡಿ: ಸಿಗುವ ಆರೋಗ್ಯ ಲಾಭಗಳು ತಿಳಿದಿರಲಿ

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವ ಅಭ್ಯಾಸ ಮಾಡಿ: ಸಿಗುವ ಆರೋಗ್ಯ ಲಾಭಗಳು...

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...