ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ

Date:

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ

ಚಾಮರಾಜನಗರ: ಹಲವು ದಸರಾ ಉತ್ಸವಗಳಲ್ಲಿ ಭಾಗವಹಿಸಿದ್ದ ವಯೋವೃದ್ಧ ಗಜೇಂದ್ರ ಎಂಬ ಸಾಕಾನೆ ಈಗ ಏಕಾಂಗಿಯಾಗಿರುವ ಹಿನ್ನೆಲೆ, ಅದನ್ನು ಶಿಬಿರಕ್ಕೆ ಸ್ಥಳಾಂತರಿಸಲು ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಬೂದಿಪಡಗ ಪ್ರದೇಶದಲ್ಲಿ ಇರುವ ಗಜೇಂದ್ರನಿಗೆ ಸದ್ಯ ಸುಮಾರು 75 ವರ್ಷ ವಯಸ್ಸಾಗಿದೆ. ಕಳೆದ ಹಲವು ವರ್ಷಗಳಿಂದ ಅದು ಒಂಟಿಯಾಗಿದ್ದು, ಅದರ ದೈಹಿಕ ಸಾಮರ್ಥ್ಯವೂ ಕಡಿಮೆಯಾಗಿದೆ.
ಹಿಂದೆ ಗಜೇಂದ್ರ ಜೊತೆ ದುರ್ಗಾಪರಮೇಶ್ವರಿ ಎಂಬ ಇನ್ನೊಂದು ಆನೆ ಇತ್ತು. ಆದರೆ ಅದು ಈಗ ಬೇರೆ ಶಿಬಿರದಲ್ಲಿರುವುದರಿಂದ ಗಜೇಂದ್ರ ಕಳೆದ 5–6 ವರ್ಷಗಳಿಂದ ಏಕಾಂಗಿಯಾಗಿದೆ.
ವಯಸ್ಸಿನ ಕಾರಣದಿಂದ ಗಜೇಂದ್ರ ಕಾಡಿಗೆ ಮೇಯಲು ಹೋಗುವ ವೇಳೆ ಬಲಿಷ್ಠ ಕಾಡಾನೆಗಳಿಂದ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ, ಮತ್ತಿಗೋಡು ಅಥವಾ ಇತರೆ ಸುರಕ್ಷಿತ ಶಿಬಿರಕ್ಕೆ ಸ್ಥಳಾಂತರಿಸಲು ಸಚಿವರು ಆದೇಶಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ:...

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...