ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕಹಿಸುದ್ದಿ

Date:

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಅನುಕೂಲವಾಗುವಂತೆ ಸರ್ಕಾರ ವರ್ಗಾವಣೆ ಕಾಯ್ದೆಯನ್ನು ಎರಡು ಬಾರಿ ತಿದ್ದುಪಡಿ ಮಾಡಿದ್ದರೂ, ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗಿಲ್ಲ ಎನ್ನಲಾಗಿದೆ.

ಶೇಕಡ 25 ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇರುವ 53 ತಾಲೂಕುಗಳನ್ನು ವರ್ಗಾವಣೆ ವ್ಯಾಪ್ತಿಯಿಂದ ಹೊರಗೆ ಇಟ್ಟಿರುವುದರಿಂದ ರಾಜ್ಯದ ಸುಮಾರು 50,000 ಶಿಕ್ಷಕರಿಗೆ ವರ್ಗಾವಣೆಯ ಅವಕಾಶ ಇಲ್ಲವಾಗಿದೆ ಎಂದು ಹೇಳಲಾಗಿದೆ.

ಪತಿ-ಪತ್ನಿಯರಿಗೆ ಕೂಡ ನಿರಾಸೆಯಾಗಿದೆ. ಪತಿ, ಪತ್ನಿ ವರ್ಗಾವಣೆ ಪ್ರಕರಣದಲ್ಲಿ ತಾಲೂಕಿನ ಒಳಗೆ ನಿಗದಿತ ವಿಷಯದ ಶಿಕ್ಷಕರ ಹುದ್ದೆ ಖಾಲಿ ಇಲ್ಲ ಎಂಬ ಕಾರಣಕ್ಕೆ ನೂರಾರು ಶಿಕ್ಷಕರ ವರ್ಗಾವಣೆ ಅವಕಾಶದಿಂದ ವಂಚಿತರಾಗಿದ್ದಾರೆ.

ಶಿಕ್ಷಕರ ಹುದ್ದೆ ಕೊರತೆಯಾಗಬಾರದು ಎಂಬ ಕಾರಣಕ್ಕೆ ಶೇಕಡ 25ರಷ್ಟು ಶಿಕ್ಷಕರ ಹುದ್ದೆ ಖಾಲಿ ಇರುವ 53 ತಾಲ್ಲೂಕುಗಳನ್ನು ವರ್ಗಾವಣೆಯಿಂದ ಪ್ರಕ್ರಿಯೆಯಿಂದ ಹೊರಗಿಡಲಾಗಿದ್ದು, ಇಂತಹ ತಾಲೂಕುಗಳಲ್ಲಿ ಕೆಲಸ ಮಾಡುತ್ತಿರುವ 50 ಸಾವಿರಕ್ಕೂ ಅಧಿಕ ಶಿಕ್ಷಕರ ವರ್ಗಾವಣೆಗೆ ಅವಕಾಶ ಸಿಕ್ಕಿಲ್ಲ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಇದರಿಂದಾಗಿ ಗೊಂದಲ ಮುಂದುವರೆದಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...