ವಾಯುಪಡೆ ವಿಮಾನ ಪತನ!

Date:

ಭಾರತೀಯ ವಾಯುಸೇನೆಗೆ ಸೇರಿದ ಮಿಗ್ 21 ಬೈಸನ್ ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ.
ರಾಜಸ್ಥಾನದ ಬರ್ಮರ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ನನ್ನು ರಕ್ಷಿಸಲಾಗಿದೆ. ಬರ್ಮರ್​ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು.

 

ಈ ವೇಳೆ ವಿಮಾನ ಪತನವಾಗಿದೆ. ಪೈಲಟನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.ಸಂಭವಿಸಿದ್ದು, ಪೈಲಟ್ ಅನ್ನು ಸುರಕ್ಷಿತವಾಗಿ ಹೊರತರಲಾಗಿದೆ. ವಿಮಾನ ಪತನವಾಗುತ್ತಿದ್ದಂತೆ ಗ್ರಾಮಸ್ಥರು ವಾಟರ್​ ಟ್ಯಾಂಕರ್​ಗಳನ್ನು ತರಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅವರೇ ಪೈಲಟನ್ನು ಹೊರಗೆ ಎಳೆದು, ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.

ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದೆ, ಇಂದು ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಉತ್ತರ್​ಲಾಯ್ ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

 

ಮೇ ತಿಂಗಳಲ್ಲಿ ಪಂಜಾಬ್‌ನ ಮೊಗಾ ಬಳಿ ತಡರಾತ್ರಿ ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲಟ್​ ಸಾವನ್ನಪ್ಪಿದ್ದಾರೆ.

ಅಪಘಾತ ಸಂಭವಿಸಿದಾಗ ವಿಮಾನವು ದಿನನಿತ್ಯದ ತರಬೇತಿ ಹಂತದಲ್ಲಿತ್ತು. ಐಎಎಫ್ ಪ್ರಕಾರ, ಪೈಲಟ್ ಸ್ಕ್ವಾಟನ್​ ಲೀಡರ್​ ಆರ್.ಅಭಿನವ್ ಚೌಧರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

“ಕಳೆದ ರಾತ್ರಿ ಪಶ್ಚಿಮ ವಲಯದಲ್ಲಿ ಐಎಎಫ್‌ನ ಬೈಸನ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಪೈಲಟ್ ಸ್ಕ್ವಾಟನ್​ ಲೀಡರ್​ ಆರ್.ಅಭಿನವ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿವೆ. ದುರಂತಕ್ಕೆ ಐಎಎಫ್‌ ಶೋಕ ವ್ಯಕ್ತಪಡಿಸುತ್ತದೆ ಮತ್ತು ದುಃಖಿತ ಕುಟುಂಬದೊಂದಿಗೆ ನಿಲ್ಲುತ್ತದೆ” ಎಂದು ಐಎಎಫ್​ ಟ್ವೀಟ್​ ಮಾಡಿದೆ.

 

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...