ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತಿಂದವರೂ ಆ ಹಣ ಕಕ್ಕಬೇಕು: ಸಿ.ಟಿ.ರವಿ

Date:

ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸಿದ್ದರಾಮಯ್ಯನವರು ಹೇಳುತ್ತಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತಿಂದವರೂ ಆ ಹಣ ಕಕ್ಕಬೇಕು. ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕು. ಅಹಿಂದ ರಾಜಕಾರಣ ಮಾಡಿದ ಸಿದ್ದರಾಮಯ್ಯನವರು ದಲಿತರ ಹಣ ತಿಂದು ನೀರು ಕುಡಿದವರನ್ನು ಹೇಗೆ ಸಹಿಸಿಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಯಾರ್ಯಾರು ಹಗರಣ ಮಾಡಿದ್ದಾರೆ, ತಪ್ಪು ಮಾಡಿದ್ದಾರೆ, ಅವರೆಲ್ಲರ ಬಗ್ಗೆಯೂ ತನಿಖೆಯಾಗಿ ಶಿಕ್ಷೆಯಾಗಲಿ. ಯಾವ ಇಲಾಖೆಯ ಹಗರಣಗಳು ಏನಾಗಿವೆ ಗೊತ್ತಿಲ್ಲ. ರಾಜ್ಯದ ಖಜಾನೆಗೆ ಕನ್ನ ಹಾಕುವ ಹೆಗ್ಗಣಗಳು ಎಲ್ಲ ಕಡೆ ತುಂಬಿವೆ. ಎಷ್ಟೇ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸಿದರೂ ಕೂಡ ಹೆಗ್ಗಣಗಳು ಖಜಾನೆ ಖಾಲಿ ಮಾಡುತ್ತಿದ್ದರೆ, ಅದು ಹೇಗೆ ತುಂಬುತ್ತೆ?. ಅಂತಹ ಹೆಗ್ಗಣಗಳನ್ನು ನಿಯಂತ್ರಿಸದೆ ಇದ್ರೆ, ನಮ್ಮ ರಾಜ್ಯದ ಖಜಾನೆ ಉಳಿಯಲ್ಲ. ಜನರ ಮೇಲೆ ತೆರಿಗೆ ಭಾರ ಮಾತ್ರವಾಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು...

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ!

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ! ಇತ್ತೀಚಿನ ದಿನಗಳಲ್ಲಿ ಚಳಿ ದಿನದಿಂದ...

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...