ವಾಹನ ಸವಾರರೇ ಈ ಸುದ್ದಿ ನೋಡಿ !

Date:

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ಭಾರೀ ಕಷ್ಟಕರವಾಗಲಿದೆ ಎಂದು ಬಿಬಿಎಂಪಿ, ಸಾರಿಗೆ ಇಲಾಖೆ, ಟ್ರಾಫಿಕ್ ಪೊಲೀಸ್, ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ನಡೆಸಿದ ಸಮೀಕ್ಷೆಯಿಂದ ಕಂಡುಬಂದಿದೆ.

ಪ್ರತಿ ಸಿಗ್ನಲ್‌ನಲ್ಲಿಯೂ 10-12 ನಿಮಿಷ ಕಾಯುವ ಸ್ಥಿತಿ ಶೀಘ್ರದಲ್ಲೇ ಬರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹಾಲಿ ಬೆಂಗಳೂರಿನ ರಸ್ತೆಗಳು ಕೇವಲ 50 ಲಕ್ಷ ವಾಹನಗಳ ಓಡಾಟಕ್ಕೆ ಯೋಗ್ಯವಾಗಿವೆ. ಆದರೆ ರಾಜಧಾನಿಯಲ್ಲಿ ವಾಹನಗಳ ಸಂಖ್ಯೆ ಈ ಮಿತಿಯನ್ನು ಎಂದೋ ಮೀರಿದೆ. ಬೆಂಗಳೂರಿನ ರಸ್ತೆಗೆ ಪ್ರತಿ ದಿನ 2000 ಹೊಸ ವಾಹನಗಳು ಇಳಿಯುತ್ತಿವೆ. ಸದ್ಯ ರಾಜಧಾನಿಯಲ್ಲಿ ಸುಮಾರು 1.18 ಕೋಟಿ ವಾಹನಗಳು ಇವೆ.

ಮುಂದಿನ ನಾಲ್ಕು ತಿಂಗಳಲ್ಲಿ 2 ಲಕ್ಷ ಹೊಸ ವಾಹನಗಳು ನಗರಕ್ಕೆ ಸೇರ್ಪಡೆಯಾಗಲಿವೆ. 2024ರ ಅಂತ್ಯಕ್ಕೆ 1 ಕೋಟಿ 21 ಲಕ್ಷ ವಾಹನಗಳು ಬೆಂಗಳೂರಿನಲ್ಲಿ ನೋಂದಣಿಯಾಗಿರಲಿವೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಹೊಸದಾಗಿ ನೋಂದಣಿಯಾಗಿ ಬೆಂಗಳೂರಿಗೆ ಬರುವ ವಾಹನಗಳ ಸಂಖ್ಯೆ ನಿತ್ಯ ಸುಮಾರು 1000. ನಿತ್ಯ ಹೊರ ರಾಜ್ಯದಿಂದ, ಜಿಲ್ಲೆಯಿಂದ ಬೆಂಗಳೂರಿಗೆ ಬಂದು ಹೋಗುವ ವಾಹನಗಳ ಸಂಖ್ಯೆ 1 ಲಕ್ಷ ಮೀರಬಹುದು.

ಇದೆಲ್ಲ ಲೆಕ್ಕಾಚಾರ ಗಮನಿಸಿದರೆ 2025ರಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಲಿದೆ. ಬೆಂಗಳೂರಿನ 162 ಜಂಕ್ಷನ್‌ಗಳಲ್ಲಿ ಕನಿಷ್ಠ 10-11 ನಿಮಿಷ ಕಾಯುವ ಸಂಕಷ್ಟದ ಸ್ಥಿತಿ ತಲೆದೋರಲಿದೆ. ಕೆ.ಆರ್ ಸರ್ಕಲ್, ಸಿಲ್ಕ್ ಬೋರ್ಡ್, ಓಲ್ಡ್ ಏರ್‌ಪೋರ್ಟ್ ರಸ್ತೆ, ಚಾಲುಕ್ಯ, ಎಲೆಕ್ಟ್ರಾನಿಕ್ ಸಿಟಿ, ಟೌನ್‌ಹಾಲ್ ಸೇರಿದಂತೆ 162 ಜಂಕ್ಷನ್‌ಗಳು ಈ ಕಂಟಕ ಎದುರಿಸಲಿವೆ. ಒಂದು ಜಂಕ್ಷನ್ ದಾಟಲು ಕನಿಷ್ಠ 10 ನಿಮಿಷವಾದರೂ ತೆಗೆದುಕೊಳ್ಳಬಹುದು. ಸಿಲ್ಕ್ ಬೋರ್ಡ್ ಸಿಗ್ನಲ್‌ನಲ್ಲಿ ಈಗಾಗಲೇ ಐದರಿಂದ ಎಂಟು ನಿಮಿಷ ಕಾಯಬೇಕಾಗಿ ಬರುತ್ತಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯದ ಸರ್ವೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಆದರೆ ರಸ್ತೆ ಅಗಲೀಕರಣದ ಮೂಲಕ ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡೋಣ ಅಂದರೆ, ಅದಕ್ಕೆ ಅವಕಾಶವೇ ಇಲ್ಲದ ಸ್ಥಿತಿ ಇದೆ. ಬಿಬಿಎಂಪಿಯಿಂದ ರಸ್ತೆ ಅಗಲೀಕರಣದ ಬಗ್ಗೆ ಸರ್ವೆ ನಡೆಯುತ್ತಿದೆ. ಆದರೆ ಇದು ದೊಡ್ಡ ಮಟ್ಟದಲ್ಲಿ ಕಾನೂನಾತ್ಮಕ ಸಮರಕ್ಕೆ ಹಾದಿ ಮಾಡಿಕೊಡಲಿದೆ. ಇದಕ್ಕಾಗಿ ಸರ್ಕಾರ ಸುರಂಗ ಮಾರ್ಗ, ಫ್ಲೈಓವರ್‌, ಅಂಡರ್‌ಪಾಸ್‌, ಮ್ಯಾಜಿಕ್‌ ಬಾಕ್ಸ್ ಇತ್ಯಾದಿಗಳ ಮೊರೆ ಹೋಗುತ್ತಿದೆ.

Share post:

Subscribe

spot_imgspot_img

Popular

More like this
Related

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಮನರೇಗಾ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ ಸುಧಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್...

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ...