ವಿಜಯನಗರದ ಕೋದಂಡರಾಮ ದೇವಸ್ಥಾನದಲ್ಲಿ ಸಿನಿಮಾ ಮುಹೂರ್ತ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ. ದೇವರ ದರ್ಶನ ಪಡೆದು, ಪೂಜೆ ಮಾಡಿ ಸಿನಿಮಾದ ಕೆಲಸವನ್ನು ಚಿತ್ರತಂಡ ಅಂದಹಾಗೆ,
ನಟ ಯಶ್, ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ, ನಿರ್ಮಾಪಕ ವಿಜಯ ಕಿರಗಂದರು, ನಿರ್ದೇಶಕ ಪ್ರಶಾಂತ್ ನೀಲ್, ಸಿನಿಮಾಟೋಗ್ರಾಫರ್ ಭುವನ್ ಗೌಡ ಇಂದಿನ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇನ್ನು ಈ ಮೂಲಕ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಚಿತ್ರೀಕರಣ ಇನ್ನೇನು ಇದೇ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು
‘ಕೆಜಿಎಫ್’ ಮೊದಲ ಭಾಗ ದೇಶಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿತ್ತು.
ಈ ಕಾರಣ ಚಾಪ್ಟರ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.ಈಗಾಗಲೇ ಪ್ರೇಕ್ಷಕರು ಕೆಜಿಎಫ್2 ಗೆ ಕಾತುರದಿಂದ ಕಾಯುತ್ತಿದ್ದಾರೆ .