ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

Date:

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ ಅನುಭವವಾಗಿದೆ. ಶುಕ್ರವಾರ ಬೆಳಿಗ್ಗೆ ಸುಮಾರು 7.49ರ ಸಮಯದಲ್ಲಿ ನಗರದ ಹಲವು ಭಾಗಗಳಲ್ಲಿ ಭೂಮಿ ನಡುಗಿದಂತ ಅನುಭವ ಆಯಿತು.

ಗಣೇಶನಗರ, ಇಬ್ರಾಹಿಂಪುರ ಬಡಾವಣೆ, ಗಡಗಿ ಲೇಔಟ್, ವಜ್ರ ಹನುಮಾನ್ ನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜೋರಾದ ಸದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭೂಕಂಪನದ ಕುರಿತು ಮಾಹಿತಿ ನೀಡುವ ಆ್ಯಪ್‌ನಲ್ಲೂ ತೀವ್ರತೆ ದಾಖಲಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿರುವ ಸಾಧ್ಯತೆ ಇದೆ

ಆಕಸ್ಮಿಕ ಕಂಪನದಿಂದ ಜನರಲ್ಲಿ ಆತಂಕ ನಿರ್ಮಾಣವಾಗಿದ್ದು, ಅನೇಕರು ಮನೆಗಳಿಂದ ಹೊರಗೆ ಬಂದು ಸುರಕ್ಷಿತ ಸ್ಥಳಗಳಿಗೆ ಧಾವಿಸಿದರು. ಕಳೆದ ಎರಡು ತಿಂಗಳಲ್ಲಿ ಈಗಾಗಲೇ 13 ಬಾರಿ ಭೂಕಂಪನ ಅನುಭವಿಸಿರುವ ವಿಜಯಪುರದ ಜನತೆ ಈಗ ಗಂಭೀರ ಚಿಂತೆಗೆ ಒಳಗಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...