ವಿಜಯಪುರ ಜನಕ್ಕೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

Date:

ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.

ಸದ್ಯ ಇರುವ ಪ್ರಸ್ತಾವನೆ ಪ್ರಕಾರ ವಿಜಯಪುರದಿಂದ ಹೊರಡುವ ರೈಲು ಮಂಗಳೂರಿಗೆ 12.40ಕ್ಕೆ ಆಗಮಿಸಲಿದೆ. ಸಂಜೆ 4.30ಕ್ಕೆ ಮತ್ತೆ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿ ಜನರಿಗೆ ತೊಂದರೆ ಆಗಲಿದೆ ಎಂದು ಸಂಸದರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ. ರೈಲು ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಬೇಕು. ಈ ಹಿಂದೆ ಇದ್ದಂತೆ ರೈಲು ಬೆಳಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡಬೇಕು. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಲಾಗಿದೆ.

ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಅನಾನುಕೂಲವಾದಲ್ಲಿ ಬಂದರಿನ ಗೂಡ್‌ಶೆಡ್‌ ಯಾರ್ಡ್‌, ಉಳ್ಳಾಲ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದು. ಪುನಃ ಜಂಕ್ಷನ್‌ಗೆ ತಂದು ವಿಜಯಪುರಕ್ಕೆ ಸಂಚಾರ ನಡೆಸಬಹುದು ಎಂದು ನಳಿನ್ ಕುಮಾರ್ ಕಟೀಲ್ ಸಲಹೆಯನ್ನು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...