No menu items!
13.9 C
Munich
Wednesday, April 29, 2026

ವಿಪಕ್ಷ ನಾಯಕನ ಪಟ್ಟಕ್ಕೆ ಅಶೋಕ್- ಕಾಂಗ್ರೆಸ್ ವ್ಯಂಗ್ಯ

Must read

ಬೆಂಗಳೂರು:- ಆರ್. ಅಶೋಕ ವಿಪಕ್ಷ ನಾಯಕನಾಹಿ ನೇಮಕ ಆಗಿರುವುದಕ್ಕೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ಕುಹಕವಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ಬಿಜೆಪಿ ತಂದು ಕೂರಿಸಿದೆ ಎಂದು ಆರ್. ಅಶೋಕ ಆಯ್ಕೆಗೆ ಕಾಂಗ್ರೆಸ್ ಲೇವಡಿ ಮಾಡಿದೆ. ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ ಅಥವಾ ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
ಅಂದಹಾಗೆ ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರನ್ನೂ ಆಯ್ಕೆ ಮಾಡಿದೆ. ನವೆಂಬರ್ 10ರಂದು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕರಾಗಿ ನೇಮಕ ಮಾಡಲಾಯಿತು. ಇದಾದ ಒಂದು ವಾರದ ಬೆನ್ನಲ್ಲೇ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article