ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ !

Date:

ಬೆಂಗಳೂರು: ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ ಎಂದು
ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ, ಘಟನೆ ಜರುಗಿದಾಗಿನಿಂದ ಸರ್ಕಾರವು ಎಫ್ ಎಸ್ ಎಲ್ ವರದಿ ಬಂದ ಬಳಿಕ ಕ್ರಮ ಜರುಗಿಸುವುದಾಗಿ ಹೇಳಿತ್ತು ಮತ್ತು ಮಾಧ್ಯಮದವರೂ ಪದೇಪದೆ ವರದಿ ಬಗ್ಗೆ ವಿಚಾರಿಸುತ್ತಿದ್ದರು ಎಂದ ಅವರು ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ದೃಢಪಟ್ಟ ಕೂಡಲೇ ಪೊಲೀಸರು ಮೂವರನ್ನು ಬಂಧಿಸಿ ಮ್ಯಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ .

ಮತ್ತು ನ್ಯಾಯಾಲಯದ ಅನುಮತಿ ಮೇರೆಗೆ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಪರಮೇಶ್ವರ್, ಯಾವುದೋ ಒಂದು ಖಾಸಗಿ ಎಫ್ ಎಸ್ ಎಲ್ ವಿಡಿಯೋ ಪರೀಕ್ಷಣೆ ನಡೆಸಿ ಪಾಕ್ ಪರ ಘೋಷಣೆ ಕೂಗಿದ್ದನ್ನು ದೃಢಪಡಿಸಿತ್ತು. ಆದರೆ ಸರ್ಕಾರ ಅದನ್ನು ಅಧಿಕೃತ ಎಂದು ಪರಿಗಣಿಸುವುದಿಲ್ಲ, ಆ ಸಂಸ್ಥೆಯು ಸರ್ಕಾರದಿಂದ ಸರ್ಟಿಫೈಡ್ ಆಗಿರುವುದಿಲ್ಲ. ಸರ್ಕಾರದಿಂದ ಸರ್ಟಿಫೈ ಆಗಿರುವ ಸಂಸ್ಥೆಯ ವರದಿಯನ್ನು ಮಾತ್ರ ಅಧಿಕೃತವೆಂದು ಪರಿಗಣಿಸಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

Share post:

Subscribe

spot_imgspot_img

Popular

More like this
Related

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...